ರಾಜ್ಯ

ಶಾಲಾ ಮಕ್ಕಳಿಗೆ ದಸರಾ ರಜೆ ವೇಳಾಪಟ್ಟಿ ಪ್ರಕಟ : ಇಲ್ಲಿದೆ ಮಾರ್ಗಸೂಚಿ

ಬೆಂಗಳೂರು : ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಮುಂದಿನ ಒಂದು ವಾರದಲ್ಲಿಯೇ ದಸರಾ ರಜೆ ಆರಂಭವಾಗಲಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್‌ನಲ್ಲಿ ಒಟ್ಟು 18 ದಿನಗಳು ರಜೆ ಸಿಗಲಿದೆ.

ಈ ಬಗ್ಗೆ ಕರ್ನಾಟಕ ಶಿಕ್ಷಣ ಇಲಾಖೆಯು ಮಾಹಿತಿ ನೀಡಿದ್ದು, ಶೈಕ್ಷಣಿಕ ವರ್ಷ ಆರಂಭದಲ್ಲಿಯೇ ರಜೆ ಹಾಗೂ ಕಾರ್ಯ ಚಟುವಟಿಕೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಂತೆ ದಸರಾ ರಜೆಗೆ ಸೆ.20 ರಿಂದ ಆರಂಭವಾಗಿ ಅ.7ರವರೆಗೂ ಇರಲಿದೆ.

ಶಾಲೆಗಳ ದಸರಾ ರಜೆಗಳಲ್ಲಿಯೇ ದಸರಾ ಹಬ್ಬದ ರಜೆ, ಗಾಂಧಿ ಜಯಂತಿ ರಜೆ (ಅಕ್ಟೋಬರ್ 2) ಹಾಗೂ ಒಂದು ದಿನ ವಾಲ್ಮೀಕಿ ಜಯಂತಿಯ (ಅಕ್ಟೋಬರ್ 7) ರಜೆ ಸೇರಿರಲಿದೆ.

ಇದನ್ನು ಓದಿ: ಮೈಸೂರು ದಸರಾ | ದಸರಾ ಸಂಭ್ರಮದ ಜತೆಗೆ ಸುರಕ್ಷತೆಗೂ ನಿಗಾವಹಿಸಿ : ಸೆಸ್ಕ್‌ ಮನವಿ

ದಸರಾ ಹಾಗೂ ಗಾಂಧಿ ಜಯಂತಿ ಹಿಂದೆ ಮುಂದೆ
2025 ರಲ್ಲಿ ದಸರಾ ಹಾಗೂ ಗಾಂಧಿ ಜಯಂತಿ ರಜೆಗಳು ಸಾಲು ಸಾಲಾಗಿ ಬಂದಿವೆ. ಗಾಂಧಿ ಜಯಂತಿ ರಾಷ್ಟ್ರೀಯ ಹಬ್ಬದ ಕಾರಣ ಶಾಲೆಗಳಲ್ಲಿ ಕಾರ್ಯಕ್ರಮ ಆಯೋಜನೆ ಮಾಡಬೇಕಾಗುತ್ತದೆ. ಆ ನಂತರ ವಾಲ್ಮೀಕಿ ಜಯಂತಿ ಅಕ್ಟೋಬರ್ ೭ ಕ್ಕೆ ಕೂಡ ಶಾಲೆಗಳಲ್ಲಿ ಕಾರ್ಯಕ್ರಮಗಳು ಇರಲಿವೆ. ಆ ದಿನ ಮಕ್ಕಳು ಶಾಲೆಗೆ ಬಂದು ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಶಾಲೆಗಳಲ್ಲಿ ಮನವಿ ಮಾಡಲಾಗುತ್ತದೆ.

ಅಕ್ಟೋಬರ್‌ನಲ್ಲಿ ಬ್ಯಾಂಕ್‌ಗಳಿಗೆ ಎರಡು ಶನಿವಾರ, 4 ಭಾನುವಾರ ಸೇರಿದಂತೆ ಒಟ್ಟು 10 ದಿನಗಳು ರಜೆ ಇರುತ್ತದೆ.

ಅಕ್ಟೋಬರ್‌ನಲ್ಲಿ ಮತ್ತೆ 2 ದಿನಗಳು ರಜೆ
ಅಕ್ಟೋಬರ್ ತಿಂಗಳಿನಲ್ಲಿ ಮತ್ತೆ 2 ದಿನಗಳು ರಜೆ ಇರಲಿವೆ. ದೀಪಾವಳಿ ಸಂದರ್ಭದಲ್ಲಿ ಅಕ್ಟೋಬರ್ 20 ನರಕ ಚತುರ್ದಶಿ, ಅಕ್ಟೋಬರ್ 22 ಕ್ಕೆ ಬಲಿಪಾಡ್ಯಮಿಗೆ ಸಾರ್ವಜನಿಕ ರಜೆ ಇದೆ. ಕೆಲವೆಡೆ ಅಕ್ಟೋಬರ್ 21ಕ್ಕೆ ಸಾಂದರ್ಭಿಕ ರಜೆ ನೀಡಿ ಸತತ ಮೂರು ದಿನ ರಜೆ ಕೊಡಲಾಗುತ್ತದೆ.

ಆಂದೋಲನ ಡೆಸ್ಕ್

Recent Posts

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

7 mins ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

2 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

2 hours ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

3 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

3 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

4 hours ago