ಬೆಂಗಳೂರು : ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಮುಂದಿನ ಒಂದು ವಾರದಲ್ಲಿಯೇ ದಸರಾ ರಜೆ ಆರಂಭವಾಗಲಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್ನಲ್ಲಿ ಒಟ್ಟು 18 ದಿನಗಳು ರಜೆ ಸಿಗಲಿದೆ.
ಈ ಬಗ್ಗೆ ಕರ್ನಾಟಕ ಶಿಕ್ಷಣ ಇಲಾಖೆಯು ಮಾಹಿತಿ ನೀಡಿದ್ದು, ಶೈಕ್ಷಣಿಕ ವರ್ಷ ಆರಂಭದಲ್ಲಿಯೇ ರಜೆ ಹಾಗೂ ಕಾರ್ಯ ಚಟುವಟಿಕೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಂತೆ ದಸರಾ ರಜೆಗೆ ಸೆ.20 ರಿಂದ ಆರಂಭವಾಗಿ ಅ.7ರವರೆಗೂ ಇರಲಿದೆ.
ಶಾಲೆಗಳ ದಸರಾ ರಜೆಗಳಲ್ಲಿಯೇ ದಸರಾ ಹಬ್ಬದ ರಜೆ, ಗಾಂಧಿ ಜಯಂತಿ ರಜೆ (ಅಕ್ಟೋಬರ್ 2) ಹಾಗೂ ಒಂದು ದಿನ ವಾಲ್ಮೀಕಿ ಜಯಂತಿಯ (ಅಕ್ಟೋಬರ್ 7) ರಜೆ ಸೇರಿರಲಿದೆ.
ಇದನ್ನು ಓದಿ: ಮೈಸೂರು ದಸರಾ | ದಸರಾ ಸಂಭ್ರಮದ ಜತೆಗೆ ಸುರಕ್ಷತೆಗೂ ನಿಗಾವಹಿಸಿ : ಸೆಸ್ಕ್ ಮನವಿ
ದಸರಾ ಹಾಗೂ ಗಾಂಧಿ ಜಯಂತಿ ಹಿಂದೆ ಮುಂದೆ
2025 ರಲ್ಲಿ ದಸರಾ ಹಾಗೂ ಗಾಂಧಿ ಜಯಂತಿ ರಜೆಗಳು ಸಾಲು ಸಾಲಾಗಿ ಬಂದಿವೆ. ಗಾಂಧಿ ಜಯಂತಿ ರಾಷ್ಟ್ರೀಯ ಹಬ್ಬದ ಕಾರಣ ಶಾಲೆಗಳಲ್ಲಿ ಕಾರ್ಯಕ್ರಮ ಆಯೋಜನೆ ಮಾಡಬೇಕಾಗುತ್ತದೆ. ಆ ನಂತರ ವಾಲ್ಮೀಕಿ ಜಯಂತಿ ಅಕ್ಟೋಬರ್ ೭ ಕ್ಕೆ ಕೂಡ ಶಾಲೆಗಳಲ್ಲಿ ಕಾರ್ಯಕ್ರಮಗಳು ಇರಲಿವೆ. ಆ ದಿನ ಮಕ್ಕಳು ಶಾಲೆಗೆ ಬಂದು ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಶಾಲೆಗಳಲ್ಲಿ ಮನವಿ ಮಾಡಲಾಗುತ್ತದೆ.
ಅಕ್ಟೋಬರ್ನಲ್ಲಿ ಬ್ಯಾಂಕ್ಗಳಿಗೆ ಎರಡು ಶನಿವಾರ, 4 ಭಾನುವಾರ ಸೇರಿದಂತೆ ಒಟ್ಟು 10 ದಿನಗಳು ರಜೆ ಇರುತ್ತದೆ.
ಅಕ್ಟೋಬರ್ನಲ್ಲಿ ಮತ್ತೆ 2 ದಿನಗಳು ರಜೆ
ಅಕ್ಟೋಬರ್ ತಿಂಗಳಿನಲ್ಲಿ ಮತ್ತೆ 2 ದಿನಗಳು ರಜೆ ಇರಲಿವೆ. ದೀಪಾವಳಿ ಸಂದರ್ಭದಲ್ಲಿ ಅಕ್ಟೋಬರ್ 20 ನರಕ ಚತುರ್ದಶಿ, ಅಕ್ಟೋಬರ್ 22 ಕ್ಕೆ ಬಲಿಪಾಡ್ಯಮಿಗೆ ಸಾರ್ವಜನಿಕ ರಜೆ ಇದೆ. ಕೆಲವೆಡೆ ಅಕ್ಟೋಬರ್ 21ಕ್ಕೆ ಸಾಂದರ್ಭಿಕ ರಜೆ ನೀಡಿ ಸತತ ಮೂರು ದಿನ ರಜೆ ಕೊಡಲಾಗುತ್ತದೆ.
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…
ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…
ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…
ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್ ಠಾಣೆಯಿಂದ ಕೇವಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್ಗಳನ್ನು…