ರಾಜ್ಯ

ಶಾಲಾ ಮಕ್ಕಳಿಗೆ ದಸರಾ ರಜೆ ವೇಳಾಪಟ್ಟಿ ಪ್ರಕಟ : ಇಲ್ಲಿದೆ ಮಾರ್ಗಸೂಚಿ

ಬೆಂಗಳೂರು : ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಮುಂದಿನ ಒಂದು ವಾರದಲ್ಲಿಯೇ ದಸರಾ ರಜೆ ಆರಂಭವಾಗಲಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್‌ನಲ್ಲಿ ಒಟ್ಟು 18 ದಿನಗಳು ರಜೆ ಸಿಗಲಿದೆ.

ಈ ಬಗ್ಗೆ ಕರ್ನಾಟಕ ಶಿಕ್ಷಣ ಇಲಾಖೆಯು ಮಾಹಿತಿ ನೀಡಿದ್ದು, ಶೈಕ್ಷಣಿಕ ವರ್ಷ ಆರಂಭದಲ್ಲಿಯೇ ರಜೆ ಹಾಗೂ ಕಾರ್ಯ ಚಟುವಟಿಕೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಂತೆ ದಸರಾ ರಜೆಗೆ ಸೆ.20 ರಿಂದ ಆರಂಭವಾಗಿ ಅ.7ರವರೆಗೂ ಇರಲಿದೆ.

ಶಾಲೆಗಳ ದಸರಾ ರಜೆಗಳಲ್ಲಿಯೇ ದಸರಾ ಹಬ್ಬದ ರಜೆ, ಗಾಂಧಿ ಜಯಂತಿ ರಜೆ (ಅಕ್ಟೋಬರ್ 2) ಹಾಗೂ ಒಂದು ದಿನ ವಾಲ್ಮೀಕಿ ಜಯಂತಿಯ (ಅಕ್ಟೋಬರ್ 7) ರಜೆ ಸೇರಿರಲಿದೆ.

ಇದನ್ನು ಓದಿ: ಮೈಸೂರು ದಸರಾ | ದಸರಾ ಸಂಭ್ರಮದ ಜತೆಗೆ ಸುರಕ್ಷತೆಗೂ ನಿಗಾವಹಿಸಿ : ಸೆಸ್ಕ್‌ ಮನವಿ

ದಸರಾ ಹಾಗೂ ಗಾಂಧಿ ಜಯಂತಿ ಹಿಂದೆ ಮುಂದೆ
2025 ರಲ್ಲಿ ದಸರಾ ಹಾಗೂ ಗಾಂಧಿ ಜಯಂತಿ ರಜೆಗಳು ಸಾಲು ಸಾಲಾಗಿ ಬಂದಿವೆ. ಗಾಂಧಿ ಜಯಂತಿ ರಾಷ್ಟ್ರೀಯ ಹಬ್ಬದ ಕಾರಣ ಶಾಲೆಗಳಲ್ಲಿ ಕಾರ್ಯಕ್ರಮ ಆಯೋಜನೆ ಮಾಡಬೇಕಾಗುತ್ತದೆ. ಆ ನಂತರ ವಾಲ್ಮೀಕಿ ಜಯಂತಿ ಅಕ್ಟೋಬರ್ ೭ ಕ್ಕೆ ಕೂಡ ಶಾಲೆಗಳಲ್ಲಿ ಕಾರ್ಯಕ್ರಮಗಳು ಇರಲಿವೆ. ಆ ದಿನ ಮಕ್ಕಳು ಶಾಲೆಗೆ ಬಂದು ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಶಾಲೆಗಳಲ್ಲಿ ಮನವಿ ಮಾಡಲಾಗುತ್ತದೆ.

ಅಕ್ಟೋಬರ್‌ನಲ್ಲಿ ಬ್ಯಾಂಕ್‌ಗಳಿಗೆ ಎರಡು ಶನಿವಾರ, 4 ಭಾನುವಾರ ಸೇರಿದಂತೆ ಒಟ್ಟು 10 ದಿನಗಳು ರಜೆ ಇರುತ್ತದೆ.

ಅಕ್ಟೋಬರ್‌ನಲ್ಲಿ ಮತ್ತೆ 2 ದಿನಗಳು ರಜೆ
ಅಕ್ಟೋಬರ್ ತಿಂಗಳಿನಲ್ಲಿ ಮತ್ತೆ 2 ದಿನಗಳು ರಜೆ ಇರಲಿವೆ. ದೀಪಾವಳಿ ಸಂದರ್ಭದಲ್ಲಿ ಅಕ್ಟೋಬರ್ 20 ನರಕ ಚತುರ್ದಶಿ, ಅಕ್ಟೋಬರ್ 22 ಕ್ಕೆ ಬಲಿಪಾಡ್ಯಮಿಗೆ ಸಾರ್ವಜನಿಕ ರಜೆ ಇದೆ. ಕೆಲವೆಡೆ ಅಕ್ಟೋಬರ್ 21ಕ್ಕೆ ಸಾಂದರ್ಭಿಕ ರಜೆ ನೀಡಿ ಸತತ ಮೂರು ದಿನ ರಜೆ ಕೊಡಲಾಗುತ್ತದೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

55 mins ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

2 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

12 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

12 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

12 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

12 hours ago