ರಾಜ್ಯ

ದಸರಾ ಸಾಂಸ್ಕೃತಿಕ ಆಚರಣೆ ಹೊರತು ಧಾರ್ಮಿಕ ಹಬ್ಬವಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಾಮುಂಡೇಶ್ವರಿ ಕೇವಲ ಹಿಂದೂಗಳ ಆಸ್ತಿ ಅಲ್ಲ. ದಸರಾ ಧಾರ್ಮಿಕ ಆಚರಣೆ ಅಲ್ಲ. ಸಾಂಸ್ಕೃತಿಕ ಆಚರಣೆ. ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡಿದ್ರೆ ತಪ್ಪೇನು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ಬಿಜೆಪಿ ವಿರೋಧ ವಿಚಾರವಾಗಿ ಮಂಗಳವಾರ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಚಾಮುಂಡಿ ಬೆಟ್ಟ, ಚಾಮುಂಡಿ ದೇವರು ಎಲ್ಲಾ ಧರ್ಮದವರಿಗೂ ಇದೆ. ಚಾಮುಂಡೇಶ್ವರಿ ಹಿಂದೂಗಳ ಆಸ್ತಿಯಲ್ಲ. ಎಲ್ಲಾ ಸಮುದಾಯದವರು ಚಾಮುಂಡೇಶ್ವರಿ ದೇವಾಲಯಕ್ಕೆ ಹೋಗ್ತಾರೆ. ಅದು ಅವರ ನಂಬಿಕೆ. ನಾವು ಮಸೀದಿ, ಚರ್ಚ್ಗೆ ಹೋಗ್ತೀವಿ, ಬಸ್ತಿ, ಜೈನ ದೇವಾಲಯ, ಗುರುದ್ವಾರಗೆ ಹೋಗ್ತೀವಿ. ಗುರುದ್ವಾರಕ್ಕೆ ಹೋಗೋದು ತಪ್ಪಿಸೋಕೆ ಅಗುತ್ತಾ? ಹಿಂದೂ ದೇವಾಲಯಕ್ಕೆ ಅವರನ್ನ ಬರೋದು ತಪ್ಪಿಸೋಕೆ ಆಗುತ್ತಾ? ಯಾರ್ ಬೇಕಾದ್ರು ಹೋಗಬಹುದು, ಬರಬಹುದು ಎಂದಿದ್ದಾರೆ.

ಇತರೆ ಧರ್ಮದವರು ಯಾಕೆ ಬೆಟ್ಟ ಹತ್ತಬಾರದು? ಯಾಕೆ ಉದ್ಘಾಟನೆ ಮಾಡಬಾರದು. ಅಯೋಧ್ಯೆಗೆ ಹಿಂದುಗಳು ಮಾತ್ರ ಬರಬೇಕು ಅಂತ ಯಾಕೆ ಬೋರ್ಡ್ ಹಾಕಿಲ್ಲ. ಎಲ್ಲಿದೆ ಆ ರೀತಿ. ನಿಮ್ಮ ಸರ್ಕಾರ ಇತ್ತು. ಹಜ್ ಕಮಿಟಿ ಸೇರಿ ಮುಸ್ಲಿಂ ಕಮಿಟಿಗಳನ್ನ ಯಾಕೆ ನೀವು ಮುಚ್ಚಿಲ್ಲ. ಇಡೀ ದೇಶದಲ್ಲಿ ಯಾಕೆ ಮುಚ್ಚೋಕೆ ಆಗಲಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ನಮ್ಮದು ಜಾತ್ಯಾತೀತ ದೇಶ. ಸಂವಿಧಾನದಲ್ಲಿ ಎಲ್ಲರಿಗೂ ರಕ್ಷಣೆ ಇದೆ. ಎಲ್ಲರಿಗೂ ಸ್ವಾಗತ ಇದೆ. ಮುಸ್ಲಿಂ ಹೆಣ್ಣು, ಹಿಂದೂ ಗಂಡ ಇರುತ್ತಾರೆ. ಅವರ ಮಗ ಏನೂ ಬೇಕಾದ್ರು ಆಚರಣೆ ಮಾಡಬಹುದು. ಕ್ರಿಶ್ಚಿಯನ್ ಗಂಡ, ಹಿಂದೂ ಹೆಂಡ್ತಿ ಇರುತ್ತಾರೆ. ಆಗ ಮಗು ಹಿಂದೂ ಧರ್ಮ ಬೇಕು ಅಂದರೆ ಯಾರು ನಿಲ್ಲಿಸೋಕೆ ಆಗುತ್ತದೆ. ಹೆಣ್ಣು ಮಗಳು ಕನ್ನಡ ಬರೆಯುತ್ತಿದ್ದರು. ನೀವು ಯಾಕೆ ಬರೆಯುತ್ತೀರಾ ಅಂತ ಯಾಕೆ ಕೇಳಲಿಲ್ಲ. ದಸರಾ ಧಾರ್ಮಿಕ ಆಚರಣೆ ಅಲ್ಲ. ಇದು ಸಾಂಸ್ಕೃತಿಕ ಆಚರಣೆ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

53 mins ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

55 mins ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

58 mins ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

1 hour ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

1 hour ago