DK Shivakumar
ಬೆಂಗಳೂರು : ಚಾಮುಂಡೇಶ್ವರಿ ಕೇವಲ ಹಿಂದೂಗಳ ಆಸ್ತಿ ಅಲ್ಲ. ದಸರಾ ಧಾರ್ಮಿಕ ಆಚರಣೆ ಅಲ್ಲ. ಸಾಂಸ್ಕೃತಿಕ ಆಚರಣೆ. ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡಿದ್ರೆ ತಪ್ಪೇನು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ಬಿಜೆಪಿ ವಿರೋಧ ವಿಚಾರವಾಗಿ ಮಂಗಳವಾರ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಚಾಮುಂಡಿ ಬೆಟ್ಟ, ಚಾಮುಂಡಿ ದೇವರು ಎಲ್ಲಾ ಧರ್ಮದವರಿಗೂ ಇದೆ. ಚಾಮುಂಡೇಶ್ವರಿ ಹಿಂದೂಗಳ ಆಸ್ತಿಯಲ್ಲ. ಎಲ್ಲಾ ಸಮುದಾಯದವರು ಚಾಮುಂಡೇಶ್ವರಿ ದೇವಾಲಯಕ್ಕೆ ಹೋಗ್ತಾರೆ. ಅದು ಅವರ ನಂಬಿಕೆ. ನಾವು ಮಸೀದಿ, ಚರ್ಚ್ಗೆ ಹೋಗ್ತೀವಿ, ಬಸ್ತಿ, ಜೈನ ದೇವಾಲಯ, ಗುರುದ್ವಾರಗೆ ಹೋಗ್ತೀವಿ. ಗುರುದ್ವಾರಕ್ಕೆ ಹೋಗೋದು ತಪ್ಪಿಸೋಕೆ ಅಗುತ್ತಾ? ಹಿಂದೂ ದೇವಾಲಯಕ್ಕೆ ಅವರನ್ನ ಬರೋದು ತಪ್ಪಿಸೋಕೆ ಆಗುತ್ತಾ? ಯಾರ್ ಬೇಕಾದ್ರು ಹೋಗಬಹುದು, ಬರಬಹುದು ಎಂದಿದ್ದಾರೆ.
ಇತರೆ ಧರ್ಮದವರು ಯಾಕೆ ಬೆಟ್ಟ ಹತ್ತಬಾರದು? ಯಾಕೆ ಉದ್ಘಾಟನೆ ಮಾಡಬಾರದು. ಅಯೋಧ್ಯೆಗೆ ಹಿಂದುಗಳು ಮಾತ್ರ ಬರಬೇಕು ಅಂತ ಯಾಕೆ ಬೋರ್ಡ್ ಹಾಕಿಲ್ಲ. ಎಲ್ಲಿದೆ ಆ ರೀತಿ. ನಿಮ್ಮ ಸರ್ಕಾರ ಇತ್ತು. ಹಜ್ ಕಮಿಟಿ ಸೇರಿ ಮುಸ್ಲಿಂ ಕಮಿಟಿಗಳನ್ನ ಯಾಕೆ ನೀವು ಮುಚ್ಚಿಲ್ಲ. ಇಡೀ ದೇಶದಲ್ಲಿ ಯಾಕೆ ಮುಚ್ಚೋಕೆ ಆಗಲಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ನಮ್ಮದು ಜಾತ್ಯಾತೀತ ದೇಶ. ಸಂವಿಧಾನದಲ್ಲಿ ಎಲ್ಲರಿಗೂ ರಕ್ಷಣೆ ಇದೆ. ಎಲ್ಲರಿಗೂ ಸ್ವಾಗತ ಇದೆ. ಮುಸ್ಲಿಂ ಹೆಣ್ಣು, ಹಿಂದೂ ಗಂಡ ಇರುತ್ತಾರೆ. ಅವರ ಮಗ ಏನೂ ಬೇಕಾದ್ರು ಆಚರಣೆ ಮಾಡಬಹುದು. ಕ್ರಿಶ್ಚಿಯನ್ ಗಂಡ, ಹಿಂದೂ ಹೆಂಡ್ತಿ ಇರುತ್ತಾರೆ. ಆಗ ಮಗು ಹಿಂದೂ ಧರ್ಮ ಬೇಕು ಅಂದರೆ ಯಾರು ನಿಲ್ಲಿಸೋಕೆ ಆಗುತ್ತದೆ. ಹೆಣ್ಣು ಮಗಳು ಕನ್ನಡ ಬರೆಯುತ್ತಿದ್ದರು. ನೀವು ಯಾಕೆ ಬರೆಯುತ್ತೀರಾ ಅಂತ ಯಾಕೆ ಕೇಳಲಿಲ್ಲ. ದಸರಾ ಧಾರ್ಮಿಕ ಆಚರಣೆ ಅಲ್ಲ. ಇದು ಸಾಂಸ್ಕೃತಿಕ ಆಚರಣೆ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…
ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…
ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…
ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…
ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…