DK Shivakumar
ಬೆಂಗಳೂರು : ಚಾಮುಂಡೇಶ್ವರಿ ಕೇವಲ ಹಿಂದೂಗಳ ಆಸ್ತಿ ಅಲ್ಲ. ದಸರಾ ಧಾರ್ಮಿಕ ಆಚರಣೆ ಅಲ್ಲ. ಸಾಂಸ್ಕೃತಿಕ ಆಚರಣೆ. ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡಿದ್ರೆ ತಪ್ಪೇನು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ಬಿಜೆಪಿ ವಿರೋಧ ವಿಚಾರವಾಗಿ ಮಂಗಳವಾರ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಚಾಮುಂಡಿ ಬೆಟ್ಟ, ಚಾಮುಂಡಿ ದೇವರು ಎಲ್ಲಾ ಧರ್ಮದವರಿಗೂ ಇದೆ. ಚಾಮುಂಡೇಶ್ವರಿ ಹಿಂದೂಗಳ ಆಸ್ತಿಯಲ್ಲ. ಎಲ್ಲಾ ಸಮುದಾಯದವರು ಚಾಮುಂಡೇಶ್ವರಿ ದೇವಾಲಯಕ್ಕೆ ಹೋಗ್ತಾರೆ. ಅದು ಅವರ ನಂಬಿಕೆ. ನಾವು ಮಸೀದಿ, ಚರ್ಚ್ಗೆ ಹೋಗ್ತೀವಿ, ಬಸ್ತಿ, ಜೈನ ದೇವಾಲಯ, ಗುರುದ್ವಾರಗೆ ಹೋಗ್ತೀವಿ. ಗುರುದ್ವಾರಕ್ಕೆ ಹೋಗೋದು ತಪ್ಪಿಸೋಕೆ ಅಗುತ್ತಾ? ಹಿಂದೂ ದೇವಾಲಯಕ್ಕೆ ಅವರನ್ನ ಬರೋದು ತಪ್ಪಿಸೋಕೆ ಆಗುತ್ತಾ? ಯಾರ್ ಬೇಕಾದ್ರು ಹೋಗಬಹುದು, ಬರಬಹುದು ಎಂದಿದ್ದಾರೆ.
ಇತರೆ ಧರ್ಮದವರು ಯಾಕೆ ಬೆಟ್ಟ ಹತ್ತಬಾರದು? ಯಾಕೆ ಉದ್ಘಾಟನೆ ಮಾಡಬಾರದು. ಅಯೋಧ್ಯೆಗೆ ಹಿಂದುಗಳು ಮಾತ್ರ ಬರಬೇಕು ಅಂತ ಯಾಕೆ ಬೋರ್ಡ್ ಹಾಕಿಲ್ಲ. ಎಲ್ಲಿದೆ ಆ ರೀತಿ. ನಿಮ್ಮ ಸರ್ಕಾರ ಇತ್ತು. ಹಜ್ ಕಮಿಟಿ ಸೇರಿ ಮುಸ್ಲಿಂ ಕಮಿಟಿಗಳನ್ನ ಯಾಕೆ ನೀವು ಮುಚ್ಚಿಲ್ಲ. ಇಡೀ ದೇಶದಲ್ಲಿ ಯಾಕೆ ಮುಚ್ಚೋಕೆ ಆಗಲಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ನಮ್ಮದು ಜಾತ್ಯಾತೀತ ದೇಶ. ಸಂವಿಧಾನದಲ್ಲಿ ಎಲ್ಲರಿಗೂ ರಕ್ಷಣೆ ಇದೆ. ಎಲ್ಲರಿಗೂ ಸ್ವಾಗತ ಇದೆ. ಮುಸ್ಲಿಂ ಹೆಣ್ಣು, ಹಿಂದೂ ಗಂಡ ಇರುತ್ತಾರೆ. ಅವರ ಮಗ ಏನೂ ಬೇಕಾದ್ರು ಆಚರಣೆ ಮಾಡಬಹುದು. ಕ್ರಿಶ್ಚಿಯನ್ ಗಂಡ, ಹಿಂದೂ ಹೆಂಡ್ತಿ ಇರುತ್ತಾರೆ. ಆಗ ಮಗು ಹಿಂದೂ ಧರ್ಮ ಬೇಕು ಅಂದರೆ ಯಾರು ನಿಲ್ಲಿಸೋಕೆ ಆಗುತ್ತದೆ. ಹೆಣ್ಣು ಮಗಳು ಕನ್ನಡ ಬರೆಯುತ್ತಿದ್ದರು. ನೀವು ಯಾಕೆ ಬರೆಯುತ್ತೀರಾ ಅಂತ ಯಾಕೆ ಕೇಳಲಿಲ್ಲ. ದಸರಾ ಧಾರ್ಮಿಕ ಆಚರಣೆ ಅಲ್ಲ. ಇದು ಸಾಂಸ್ಕೃತಿಕ ಆಚರಣೆ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…