ಚಿಕ್ಕಮಗಳೂರು: ತಾಲ್ಲೂಕಿನ ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಕಳೆದ 9 ದಿನಗಳಿಂದ ನಡೆಯುತ್ತಿದ್ದ ದತ್ತ ಜಯಂತಿಗೆ ಶಾಂತಿಯುತ ತೆರೆಬಿದ್ದಿದೆ.
ದಕ್ಷಿಣ ಅಯೋಧ್ಯೆ ಎಂದೇ ಖ್ಯಾತಿಯಾಗಿರುವ ಧಾರ್ಮಿಕ ಹಾಗೂ ವಿವಾದಿತ ಪ್ರದೇಶ ದತ್ತಪೀಠದಲ್ಲಿ ಮುಂಜಾನೆಯಿಂದಲೇ ಸಾವಿರಾರು ಮಂದಿ ಭಾರೀ ಭದ್ರತೆ ನಡುವೆ ದತ್ತಪಾದುಕೆ ದರ್ಶನ ಪಡೆದು ಪುನೀತರಾದರು.
ನಾಲ್ಕು ಸಾವಿರಕ್ಕೂ ಅಧಿಕ ಪೊಲೀಸರ ಕಣ್ಗಾವಲಿನಲ್ಲಿ 15 ಸಾವಿರ ಮಂದಿ ಸಾರ್ವಜನಿಕರು ಪಾದುಕೆ ದರ್ಶನ ಪಡೆದರು.
ಸಾರ್ವಜನಿಕರು ಪಾದುಕೆ ದರ್ಶನಕ್ಕೆ ಬರುವ ವೇಳೆ ದತ್ತಪೀಠ ಸಂಪೂರ್ಣ ಹಿಂದುಗಳ ಪೀಠವಾಗಬೇಕು. ಗೋರಿಗಳನ್ನು ಸ್ಥಳಾಂತರಿಸಬೇಕು ಎಂಬ ಆಕ್ರೋಶದ ಘೋಷಣೆ ಕೂಗಿದ್ದಾರೆ. ಇದರ ನಡುವೆ ಮೊದಲ ಬಾರಿಗೆ ಶ್ರೀರಾಮಸೇನೆ, ಭಜರಂಗದಳ ಹಾಗೂ ವಿಶ್ವಹಿಂದೂ ಪರಿಷದ್ ನಾಯಕರು ಒಟ್ಟಿಗೆ ಸೇರಿ ಒಗ್ಗಟ್ಟಿನ ಮಂತ್ರ ಪಠಿಸಿದರು.
ಇನ್ನು ದತ್ತಾತ್ರೇಯರ ಗುಹೆ ಸಮೀಪದಲ್ಲಿಯೇ ಹೋಮ-ಹವನ ನಡೆದಿದ್ದು, ದತ್ತಮಾಲಾಧಾರಿಗಳು ಇರುಮುಡಿ ಹೊತ್ತು ಕಾಲ್ನಡಿಗೆಯಲ್ಲಿ ಬಂದು ದತ್ತಪಾದುಕೆ ದರ್ಶನ ಮಾಡಿದರು.
ಈ ಮೂಲಕ ಕಳೆದ 9 ದಿನಗಳಿಂದ ವ್ರತ ಆಚರಣೆಯೊಂದಿಗೆ ನಡೆದ ದತ್ತಜಯಂತಿ ಶಾಂತಿಯುತವಾಗಿ ಸಂಪನ್ನಗೊಂಡಿತು.
ಟೆಹರಾನ್: ಇರಾನ್ ಮೇಲಿನ ಯುದ್ಧಕ್ಕೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡು ವಾರಗಳ ಕದನ ವಿರಾಮ ಘೋಷಣೆ ಮಾಡಿದ್ದಾರೆ. ಕದನ…
ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿ ರಸ್ತೆಯ ಬೈಪಾಸ್ ಬಳಿ ಭೀಮಾನದಿ ಸೇತುವೆಯ ಬಫರ್ ಜೋನ್ ಪ್ರದೇಶದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಹುಲಿಯನ್ನು ಸೆರೆ ಹಿಡಿಯಲು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿರುವ ಘಟನೆ ತಾಲ್ಲೂಕಿನ…
ಮೈಸೂರು: ಕಾರ್ಪೋರೇಷನ್ ನೀರಿನ ದರ ಏರಿಕೆ ಮಾಡುತ್ತಿದ್ದಾರೆ ಎಂದು ಅರ್ಧ ಪೈಸೆ ಜಾಸ್ತಿಯಾಗಿರುವುದಕ್ಕೆ ಹೋರಾಟ ಮಾಡುತ್ತಾರೆ. ಆದರೆ ರೈತರ ಸಮಸ್ಯೆಗಳ…
ಮೈಸೂರು: RSS ವಿಷ ಸರ್ಪ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ…
ಮೈಸೂರು: ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಆಟೋ ಚಾಲಕರನ್ನು ಮುಂದೆ ಬಿಟ್ಟು ಸರ್ಕಾರಕ್ಕೆ ಕೆಟ್ಟ ಹೆಸರು ತರುವ…