ರಾಜ್ಯ

ಕಳೆದ 9 ದಿನಗಳಿಂದ ನಡೆಯುತ್ತಿದ್ದ ದತ್ತ ಜಯಂತಿಗೆ ಶಾಂತಿಯುತ ತೆರೆ

ಚಿಕ್ಕಮಗಳೂರು: ತಾಲ್ಲೂಕಿನ ಇನಾಂ ದತ್ತಾತ್ರೇಯ ಬಾಬಾಬುಡನ್‌ ಸ್ವಾಮಿ ದರ್ಗಾದಲ್ಲಿ ಕಳೆದ 9 ದಿನಗಳಿಂದ ನಡೆಯುತ್ತಿದ್ದ ದತ್ತ ಜಯಂತಿಗೆ ಶಾಂತಿಯುತ ತೆರೆಬಿದ್ದಿದೆ.

ದಕ್ಷಿಣ ಅಯೋಧ್ಯೆ ಎಂದೇ ಖ್ಯಾತಿಯಾಗಿರುವ ಧಾರ್ಮಿಕ ಹಾಗೂ ವಿವಾದಿತ ಪ್ರದೇಶ ದತ್ತಪೀಠದಲ್ಲಿ ಮುಂಜಾನೆಯಿಂದಲೇ ಸಾವಿರಾರು ಮಂದಿ ಭಾರೀ ಭದ್ರತೆ ನಡುವೆ ದತ್ತಪಾದುಕೆ ದರ್ಶನ ಪಡೆದು ಪುನೀತರಾದರು.

ನಾಲ್ಕು ಸಾವಿರಕ್ಕೂ ಅಧಿಕ ಪೊಲೀಸರ ಕಣ್ಗಾವಲಿನಲ್ಲಿ 15 ಸಾವಿರ ಮಂದಿ ಸಾರ್ವಜನಿಕರು ಪಾದುಕೆ ದರ್ಶನ ಪಡೆದರು.

ಸಾರ್ವಜನಿಕರು ಪಾದುಕೆ ದರ್ಶನಕ್ಕೆ ಬರುವ ವೇಳೆ ದತ್ತಪೀಠ ಸಂಪೂರ್ಣ ಹಿಂದುಗಳ ಪೀಠವಾಗಬೇಕು. ಗೋರಿಗಳನ್ನು ಸ್ಥಳಾಂತರಿಸಬೇಕು ಎಂಬ ಆಕ್ರೋಶದ ಘೋಷಣೆ ಕೂಗಿದ್ದಾರೆ. ಇದರ ನಡುವೆ ಮೊದಲ ಬಾರಿಗೆ ಶ್ರೀರಾಮಸೇನೆ, ಭಜರಂಗದಳ ಹಾಗೂ ವಿಶ್ವಹಿಂದೂ ಪರಿಷದ್‌ ನಾಯಕರು ಒಟ್ಟಿಗೆ ಸೇರಿ ಒಗ್ಗಟ್ಟಿನ ಮಂತ್ರ ಪಠಿಸಿದರು.

ಇನ್ನು ದತ್ತಾತ್ರೇಯರ ಗುಹೆ ಸಮೀಪದಲ್ಲಿಯೇ ಹೋಮ-ಹವನ ನಡೆದಿದ್ದು, ದತ್ತಮಾಲಾಧಾರಿಗಳು ಇರುಮುಡಿ ಹೊತ್ತು ಕಾಲ್ನಡಿಗೆಯಲ್ಲಿ ಬಂದು ದತ್ತಪಾದುಕೆ ದರ್ಶನ ಮಾಡಿದರು.

ಈ ಮೂಲಕ ಕಳೆದ 9 ದಿನಗಳಿಂದ ವ್ರತ ಆಚರಣೆಯೊಂದಿಗೆ ನಡೆದ ದತ್ತಜಯಂತಿ ಶಾಂತಿಯುತವಾಗಿ ಸಂಪನ್ನಗೊಂಡಿತು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

3 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

3 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

3 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

13 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

15 hours ago