ಚಿಕ್ಕಮಗಳೂರು: ತಾಲ್ಲೂಕಿನ ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಕಳೆದ 9 ದಿನಗಳಿಂದ ನಡೆಯುತ್ತಿದ್ದ ದತ್ತ ಜಯಂತಿಗೆ ಶಾಂತಿಯುತ ತೆರೆಬಿದ್ದಿದೆ.
ದಕ್ಷಿಣ ಅಯೋಧ್ಯೆ ಎಂದೇ ಖ್ಯಾತಿಯಾಗಿರುವ ಧಾರ್ಮಿಕ ಹಾಗೂ ವಿವಾದಿತ ಪ್ರದೇಶ ದತ್ತಪೀಠದಲ್ಲಿ ಮುಂಜಾನೆಯಿಂದಲೇ ಸಾವಿರಾರು ಮಂದಿ ಭಾರೀ ಭದ್ರತೆ ನಡುವೆ ದತ್ತಪಾದುಕೆ ದರ್ಶನ ಪಡೆದು ಪುನೀತರಾದರು.
ನಾಲ್ಕು ಸಾವಿರಕ್ಕೂ ಅಧಿಕ ಪೊಲೀಸರ ಕಣ್ಗಾವಲಿನಲ್ಲಿ 15 ಸಾವಿರ ಮಂದಿ ಸಾರ್ವಜನಿಕರು ಪಾದುಕೆ ದರ್ಶನ ಪಡೆದರು.
ಸಾರ್ವಜನಿಕರು ಪಾದುಕೆ ದರ್ಶನಕ್ಕೆ ಬರುವ ವೇಳೆ ದತ್ತಪೀಠ ಸಂಪೂರ್ಣ ಹಿಂದುಗಳ ಪೀಠವಾಗಬೇಕು. ಗೋರಿಗಳನ್ನು ಸ್ಥಳಾಂತರಿಸಬೇಕು ಎಂಬ ಆಕ್ರೋಶದ ಘೋಷಣೆ ಕೂಗಿದ್ದಾರೆ. ಇದರ ನಡುವೆ ಮೊದಲ ಬಾರಿಗೆ ಶ್ರೀರಾಮಸೇನೆ, ಭಜರಂಗದಳ ಹಾಗೂ ವಿಶ್ವಹಿಂದೂ ಪರಿಷದ್ ನಾಯಕರು ಒಟ್ಟಿಗೆ ಸೇರಿ ಒಗ್ಗಟ್ಟಿನ ಮಂತ್ರ ಪಠಿಸಿದರು.
ಇನ್ನು ದತ್ತಾತ್ರೇಯರ ಗುಹೆ ಸಮೀಪದಲ್ಲಿಯೇ ಹೋಮ-ಹವನ ನಡೆದಿದ್ದು, ದತ್ತಮಾಲಾಧಾರಿಗಳು ಇರುಮುಡಿ ಹೊತ್ತು ಕಾಲ್ನಡಿಗೆಯಲ್ಲಿ ಬಂದು ದತ್ತಪಾದುಕೆ ದರ್ಶನ ಮಾಡಿದರು.
ಈ ಮೂಲಕ ಕಳೆದ 9 ದಿನಗಳಿಂದ ವ್ರತ ಆಚರಣೆಯೊಂದಿಗೆ ನಡೆದ ದತ್ತಜಯಂತಿ ಶಾಂತಿಯುತವಾಗಿ ಸಂಪನ್ನಗೊಂಡಿತು.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…