ರಾಜ್ಯ

ಕಳೆದ 9 ದಿನಗಳಿಂದ ನಡೆಯುತ್ತಿದ್ದ ದತ್ತ ಜಯಂತಿಗೆ ಶಾಂತಿಯುತ ತೆರೆ

ಚಿಕ್ಕಮಗಳೂರು: ತಾಲ್ಲೂಕಿನ ಇನಾಂ ದತ್ತಾತ್ರೇಯ ಬಾಬಾಬುಡನ್‌ ಸ್ವಾಮಿ ದರ್ಗಾದಲ್ಲಿ ಕಳೆದ 9 ದಿನಗಳಿಂದ ನಡೆಯುತ್ತಿದ್ದ ದತ್ತ ಜಯಂತಿಗೆ ಶಾಂತಿಯುತ ತೆರೆಬಿದ್ದಿದೆ.

ದಕ್ಷಿಣ ಅಯೋಧ್ಯೆ ಎಂದೇ ಖ್ಯಾತಿಯಾಗಿರುವ ಧಾರ್ಮಿಕ ಹಾಗೂ ವಿವಾದಿತ ಪ್ರದೇಶ ದತ್ತಪೀಠದಲ್ಲಿ ಮುಂಜಾನೆಯಿಂದಲೇ ಸಾವಿರಾರು ಮಂದಿ ಭಾರೀ ಭದ್ರತೆ ನಡುವೆ ದತ್ತಪಾದುಕೆ ದರ್ಶನ ಪಡೆದು ಪುನೀತರಾದರು.

ನಾಲ್ಕು ಸಾವಿರಕ್ಕೂ ಅಧಿಕ ಪೊಲೀಸರ ಕಣ್ಗಾವಲಿನಲ್ಲಿ 15 ಸಾವಿರ ಮಂದಿ ಸಾರ್ವಜನಿಕರು ಪಾದುಕೆ ದರ್ಶನ ಪಡೆದರು.

ಸಾರ್ವಜನಿಕರು ಪಾದುಕೆ ದರ್ಶನಕ್ಕೆ ಬರುವ ವೇಳೆ ದತ್ತಪೀಠ ಸಂಪೂರ್ಣ ಹಿಂದುಗಳ ಪೀಠವಾಗಬೇಕು. ಗೋರಿಗಳನ್ನು ಸ್ಥಳಾಂತರಿಸಬೇಕು ಎಂಬ ಆಕ್ರೋಶದ ಘೋಷಣೆ ಕೂಗಿದ್ದಾರೆ. ಇದರ ನಡುವೆ ಮೊದಲ ಬಾರಿಗೆ ಶ್ರೀರಾಮಸೇನೆ, ಭಜರಂಗದಳ ಹಾಗೂ ವಿಶ್ವಹಿಂದೂ ಪರಿಷದ್‌ ನಾಯಕರು ಒಟ್ಟಿಗೆ ಸೇರಿ ಒಗ್ಗಟ್ಟಿನ ಮಂತ್ರ ಪಠಿಸಿದರು.

ಇನ್ನು ದತ್ತಾತ್ರೇಯರ ಗುಹೆ ಸಮೀಪದಲ್ಲಿಯೇ ಹೋಮ-ಹವನ ನಡೆದಿದ್ದು, ದತ್ತಮಾಲಾಧಾರಿಗಳು ಇರುಮುಡಿ ಹೊತ್ತು ಕಾಲ್ನಡಿಗೆಯಲ್ಲಿ ಬಂದು ದತ್ತಪಾದುಕೆ ದರ್ಶನ ಮಾಡಿದರು.

ಈ ಮೂಲಕ ಕಳೆದ 9 ದಿನಗಳಿಂದ ವ್ರತ ಆಚರಣೆಯೊಂದಿಗೆ ನಡೆದ ದತ್ತಜಯಂತಿ ಶಾಂತಿಯುತವಾಗಿ ಸಂಪನ್ನಗೊಂಡಿತು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

41 mins ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

43 mins ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

45 mins ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

47 mins ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

51 mins ago