ಚಿಕ್ಕಮಗಳೂರು: ಅಯೋಧ್ಯೆ ರಾಮ ಮಂದಿರದ ಕರಸೇವಕರ ಕೇಸ್ಗೆ ಜೀವ ಕೊಟ್ಟ ಬೆನ್ನಲ್ಲೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ಸಮಾಧಿ ಸೇರಿದ್ದ 2017ರಲ್ಲಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಗಿರಿಧಾಮದಲ್ಲಿರುವ ದತ್ತ ಪೀಠದಲ್ಲಿದ್ದ ಗೋರಿಯನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಮರುಜೀವ ನೀಡಲಾಗಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಕೇಸ್ ಕ್ಲೋಸ್ ಆಗಿತ್ತು. ಇದೀಗ ರಾಜ್ಯ ಸರ್ಕಾರ ರೀ ಓಪನ್ ಮಾಡುವ ಮೂಲಕ 2017ರಲ್ಲಿ ನಡೆದ ಘಟನೆಗೆ 7 ವರ್ಷದ ಬಳಿಕ, ದತ್ತಪೀಠ ಹೋರಾಟಗಾರರ ಮೇಲಿದ್ದ ಹಳೇ ಕೇಸ್ಗೆ ಮರುಜೀವ ನೀಡಿದ್ದಾರೆ.
ಒಟ್ಟು 14 ಜನರ ಮೇಲೆ ಈ ಪ್ರಕರಣ ದಾಖಲಾಗಿದ್ದು, ತುಡುಕೂರು ಮಂಜು, ಶಿವರಾಜ್, ಸಂದೇಶ್, ಸುಮಂತ್, ನಾಗ, ನಾಗೇಂದ್ರ ಪೂಜಾರಿ, ಮೋಹನ್, ಅಶೋಕ್, ತೇಜು, ಶ್ರೀನಾಥ್, ಲೋಕೇಶ್, ಮಹೇಂದ್ರ, ಸಂದೀಪ್, ರಾಮು ಅವರು ಆರೋಪಿಗಳಾಗಿದ್ದಾರೆ.
ಆಪಾದಿತರು ಮುಂದಿನ ಸೋಮವಾರ ಜ.8ಕ್ಕೆ ಕೋರ್ಟ್ಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಚಿಕ್ಕಮಗಳೂರು ತಾಲೂಕು ಇನಾಂ ದತ್ತಾತ್ರೇಯ ಬಾಬಾ ಬುಡನ್ ದರ್ಗಾದಲ್ಲಿ ಗೋರಿಯನ್ನು ಧ್ವಂಸಗೊಳಿಸಿದ ಘಟನೆ ನಡೆದಿತ್ತು.
ಮಂಜು ಕೋಟೆ ಕೋಟೆ: ಕೆಲವರು ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸಲು ಮುಂದಾಗಿದ್ದ ಹಿನ್ನೆಲೆಯಲ್ಲಿ ಚಿಕಾಗೋದಿಂದ ಆಗಮಿಸಿ ದಾಖಲೆ ಸಲ್ಲಿಸಿದ…
ಮೈಸೂರು:ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ ಜತೆಗೆ,ರಾಜಕಾಲುವೆಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲಾಗದ ಸನ್ನಿವೇಶ ನಿರ್ಮಾಣವಾಗಿದ್ದು,ಇದಕ್ಕೆ ಶಾಶ್ವತ ಪರಿಹಾರ…
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…