ಚಿಕ್ಕಮಗಳೂರು: ಅಯೋಧ್ಯೆ ರಾಮ ಮಂದಿರದ ಕರಸೇವಕರ ಕೇಸ್ಗೆ ಜೀವ ಕೊಟ್ಟ ಬೆನ್ನಲ್ಲೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ಸಮಾಧಿ ಸೇರಿದ್ದ 2017ರಲ್ಲಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಗಿರಿಧಾಮದಲ್ಲಿರುವ ದತ್ತ ಪೀಠದಲ್ಲಿದ್ದ ಗೋರಿಯನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಮರುಜೀವ ನೀಡಲಾಗಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಕೇಸ್ ಕ್ಲೋಸ್ ಆಗಿತ್ತು. ಇದೀಗ ರಾಜ್ಯ ಸರ್ಕಾರ ರೀ ಓಪನ್ ಮಾಡುವ ಮೂಲಕ 2017ರಲ್ಲಿ ನಡೆದ ಘಟನೆಗೆ 7 ವರ್ಷದ ಬಳಿಕ, ದತ್ತಪೀಠ ಹೋರಾಟಗಾರರ ಮೇಲಿದ್ದ ಹಳೇ ಕೇಸ್ಗೆ ಮರುಜೀವ ನೀಡಿದ್ದಾರೆ.
ಒಟ್ಟು 14 ಜನರ ಮೇಲೆ ಈ ಪ್ರಕರಣ ದಾಖಲಾಗಿದ್ದು, ತುಡುಕೂರು ಮಂಜು, ಶಿವರಾಜ್, ಸಂದೇಶ್, ಸುಮಂತ್, ನಾಗ, ನಾಗೇಂದ್ರ ಪೂಜಾರಿ, ಮೋಹನ್, ಅಶೋಕ್, ತೇಜು, ಶ್ರೀನಾಥ್, ಲೋಕೇಶ್, ಮಹೇಂದ್ರ, ಸಂದೀಪ್, ರಾಮು ಅವರು ಆರೋಪಿಗಳಾಗಿದ್ದಾರೆ.
ಆಪಾದಿತರು ಮುಂದಿನ ಸೋಮವಾರ ಜ.8ಕ್ಕೆ ಕೋರ್ಟ್ಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಚಿಕ್ಕಮಗಳೂರು ತಾಲೂಕು ಇನಾಂ ದತ್ತಾತ್ರೇಯ ಬಾಬಾ ಬುಡನ್ ದರ್ಗಾದಲ್ಲಿ ಗೋರಿಯನ್ನು ಧ್ವಂಸಗೊಳಿಸಿದ ಘಟನೆ ನಡೆದಿತ್ತು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…