ರಾಜ್ಯ

ದತ್ತಪೀಠದ ಗೋರಿ ಧ್ವಂಸ ಪ್ರಕರಣಕ್ಕೆ ಮರುಜೀವ!

ಚಿಕ್ಕಮಗಳೂರು: ಅಯೋಧ್ಯೆ ರಾಮ ಮಂದಿರದ ಕರಸೇವಕರ ಕೇಸ್‌ಗೆ ಜೀವ ಕೊಟ್ಟ ಬೆನ್ನಲ್ಲೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ಸಮಾಧಿ ಸೇರಿದ್ದ 2017ರಲ್ಲಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಗಿರಿಧಾಮದಲ್ಲಿರುವ ದತ್ತ ಪೀಠದಲ್ಲಿದ್ದ ಗೋರಿಯನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಮರುಜೀವ ನೀಡಲಾಗಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಕೇಸ್​​ ಕ್ಲೋಸ್ ಆಗಿತ್ತು. ಇದೀಗ ರಾಜ್ಯ ಸರ್ಕಾರ ರೀ ಓಪನ್ ಮಾಡುವ ಮೂಲಕ 2017ರಲ್ಲಿ ನಡೆದ ಘಟನೆಗೆ 7 ವರ್ಷದ ಬಳಿಕ, ದತ್ತಪೀಠ ಹೋರಾಟಗಾರರ ಮೇಲಿದ್ದ ಹಳೇ ಕೇಸ್‌ಗೆ ಮರುಜೀವ ನೀಡಿದ್ದಾರೆ.

ಒಟ್ಟು 14 ಜನರ ಮೇಲೆ ಈ ಪ್ರಕರಣ ದಾಖಲಾಗಿದ್ದು, ತುಡುಕೂರು ಮಂಜು, ಶಿವರಾಜ್, ಸಂದೇಶ್, ಸುಮಂತ್, ನಾಗ, ನಾಗೇಂದ್ರ ಪೂಜಾರಿ, ಮೋಹನ್, ಅಶೋಕ್, ತೇಜು, ಶ್ರೀನಾಥ್, ಲೋಕೇಶ್, ಮಹೇಂದ್ರ, ಸಂದೀಪ್, ರಾಮು ಅವರು ಆರೋಪಿಗಳಾಗಿದ್ದಾರೆ.

ಆಪಾದಿತರು ಮುಂದಿನ ಸೋಮವಾರ ಜ.8ಕ್ಕೆ ಕೋರ್ಟ್​ಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಚಿಕ್ಕಮಗಳೂರು ತಾಲೂಕು ಇನಾಂ ದತ್ತಾತ್ರೇಯ ಬಾಬಾ ಬುಡನ್ ದರ್ಗಾದಲ್ಲಿ ಗೋರಿಯನ್ನು ಧ್ವಂಸಗೊಳಿಸಿದ ಘಟನೆ ನಡೆದಿತ್ತು. ‌

andolanait

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

6 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

6 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

6 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

6 hours ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

15 hours ago