ಚಿಕ್ಕಮಗಳೂರು: ಅಯೋಧ್ಯೆ ರಾಮ ಮಂದಿರದ ಕರಸೇವಕರ ಕೇಸ್ಗೆ ಜೀವ ಕೊಟ್ಟ ಬೆನ್ನಲ್ಲೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ಸಮಾಧಿ ಸೇರಿದ್ದ 2017ರಲ್ಲಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಗಿರಿಧಾಮದಲ್ಲಿರುವ ದತ್ತ ಪೀಠದಲ್ಲಿದ್ದ ಗೋರಿಯನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಮರುಜೀವ ನೀಡಲಾಗಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಕೇಸ್ ಕ್ಲೋಸ್ ಆಗಿತ್ತು. ಇದೀಗ ರಾಜ್ಯ ಸರ್ಕಾರ ರೀ ಓಪನ್ ಮಾಡುವ ಮೂಲಕ 2017ರಲ್ಲಿ ನಡೆದ ಘಟನೆಗೆ 7 ವರ್ಷದ ಬಳಿಕ, ದತ್ತಪೀಠ ಹೋರಾಟಗಾರರ ಮೇಲಿದ್ದ ಹಳೇ ಕೇಸ್ಗೆ ಮರುಜೀವ ನೀಡಿದ್ದಾರೆ.
ಒಟ್ಟು 14 ಜನರ ಮೇಲೆ ಈ ಪ್ರಕರಣ ದಾಖಲಾಗಿದ್ದು, ತುಡುಕೂರು ಮಂಜು, ಶಿವರಾಜ್, ಸಂದೇಶ್, ಸುಮಂತ್, ನಾಗ, ನಾಗೇಂದ್ರ ಪೂಜಾರಿ, ಮೋಹನ್, ಅಶೋಕ್, ತೇಜು, ಶ್ರೀನಾಥ್, ಲೋಕೇಶ್, ಮಹೇಂದ್ರ, ಸಂದೀಪ್, ರಾಮು ಅವರು ಆರೋಪಿಗಳಾಗಿದ್ದಾರೆ.
ಆಪಾದಿತರು ಮುಂದಿನ ಸೋಮವಾರ ಜ.8ಕ್ಕೆ ಕೋರ್ಟ್ಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಚಿಕ್ಕಮಗಳೂರು ತಾಲೂಕು ಇನಾಂ ದತ್ತಾತ್ರೇಯ ಬಾಬಾ ಬುಡನ್ ದರ್ಗಾದಲ್ಲಿ ಗೋರಿಯನ್ನು ಧ್ವಂಸಗೊಳಿಸಿದ ಘಟನೆ ನಡೆದಿತ್ತು.
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…