ರಾಜ್ಯ

ದತ್ತಪೀಠದ ಗೋರಿ ಧ್ವಂಸ ಪ್ರಕರಣಕ್ಕೆ ಮರುಜೀವ!

ಚಿಕ್ಕಮಗಳೂರು: ಅಯೋಧ್ಯೆ ರಾಮ ಮಂದಿರದ ಕರಸೇವಕರ ಕೇಸ್‌ಗೆ ಜೀವ ಕೊಟ್ಟ ಬೆನ್ನಲ್ಲೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ಸಮಾಧಿ ಸೇರಿದ್ದ 2017ರಲ್ಲಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಗಿರಿಧಾಮದಲ್ಲಿರುವ ದತ್ತ ಪೀಠದಲ್ಲಿದ್ದ ಗೋರಿಯನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಮರುಜೀವ ನೀಡಲಾಗಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಕೇಸ್​​ ಕ್ಲೋಸ್ ಆಗಿತ್ತು. ಇದೀಗ ರಾಜ್ಯ ಸರ್ಕಾರ ರೀ ಓಪನ್ ಮಾಡುವ ಮೂಲಕ 2017ರಲ್ಲಿ ನಡೆದ ಘಟನೆಗೆ 7 ವರ್ಷದ ಬಳಿಕ, ದತ್ತಪೀಠ ಹೋರಾಟಗಾರರ ಮೇಲಿದ್ದ ಹಳೇ ಕೇಸ್‌ಗೆ ಮರುಜೀವ ನೀಡಿದ್ದಾರೆ.

ಒಟ್ಟು 14 ಜನರ ಮೇಲೆ ಈ ಪ್ರಕರಣ ದಾಖಲಾಗಿದ್ದು, ತುಡುಕೂರು ಮಂಜು, ಶಿವರಾಜ್, ಸಂದೇಶ್, ಸುಮಂತ್, ನಾಗ, ನಾಗೇಂದ್ರ ಪೂಜಾರಿ, ಮೋಹನ್, ಅಶೋಕ್, ತೇಜು, ಶ್ರೀನಾಥ್, ಲೋಕೇಶ್, ಮಹೇಂದ್ರ, ಸಂದೀಪ್, ರಾಮು ಅವರು ಆರೋಪಿಗಳಾಗಿದ್ದಾರೆ.

ಆಪಾದಿತರು ಮುಂದಿನ ಸೋಮವಾರ ಜ.8ಕ್ಕೆ ಕೋರ್ಟ್​ಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಚಿಕ್ಕಮಗಳೂರು ತಾಲೂಕು ಇನಾಂ ದತ್ತಾತ್ರೇಯ ಬಾಬಾ ಬುಡನ್ ದರ್ಗಾದಲ್ಲಿ ಗೋರಿಯನ್ನು ಧ್ವಂಸಗೊಳಿಸಿದ ಘಟನೆ ನಡೆದಿತ್ತು. ‌

andolanait

Recent Posts

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

2 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

4 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

9 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

9 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

11 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

11 hours ago