ರಾಜ್ಯ

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು !

ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ.

ಪುಷ್ಪಲತಾ (55) ಮೃತ ತಾಯಿ, ಸುಚಿತ್ರಾ (35) ಕೊಲೆಗೈದ ಮಗಳು. ತಾಯಿ ಪುಷ್ಪಲತಾ ಹೆಸರಲ್ಲಿ ಒಂದು ಮನೆ ಹಾಗೂ ಬ್ಯಾಂಕ್ ಖಾತೆಯಲ್ಲಿ 40 ಲಕ್ಷ ರೂಪಾಯಿ ಇತ್ತು. ಇದನ್ನು ಲಪಟಾಯಿಸಲು ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಆರೋಪಿ ಸುಚಿತ್ರಾ ತುಮಕೂರು ನಗರದ ಶ್ರೀನಗರದಲ್ಲಿ ತನ್ನ ಗಂಡನೊಂದಿಗೆ ವಾಸವಿದ್ದಳು. ಸುಮಾರು ಒಂದೂವರೆ ವರ್ಷಗಳ ಹಿಂದೆ ಸುಚಿತ್ರಾಳ ತಂದೆ ನಿಧನರಾಗಿದ್ದರು. ಈ ಸಾವಿಗೆ ತಾಯಿ ಪುಷ್ಪವತಿ ಕಾರಣ ಎನ್ನುವ ಶಂಕೆಯನ್ನು ಸುಚಿತ್ರಾಗೆ ಜ್ಯೋತಿಷಿ ಹೇಳಿದ್ದನು. ಆನ್​ಲೈನ್​​ನಲ್ಲಿ ಜ್ಯೋತಿಷಿಯನ್ನ ಸಂಪರ್ಕಿಸಿದ್ದ ಸುಚಿತ್ರಾ‌‌, ತಂದೆ ಸಾವಿಗೆ ನಿಮ್ಮ ತಾಯಿ ಮಾಟ ಮಾಡಿಸಿದ್ದಾಳೆ ಎಂಬ ಜ್ಯೋತಿಷ್ಯದ ಮಾತುಗಳನ್ನು ನಂಬಿದ್ದಳು ಎನ್ನಲಾಗಿದೆ.

ತಂದೆಯ ಸಾವಿಗೆ ತಾಯಿಯೇ ಕಾರಣ ಎಂದು ಜ್ಯೋತಿಷಿ ಹೇಳಿದ್ದ ಮಾತನ್ನು ನಂಬಿದ್ದ ಸುಚಿತ್ರಾ, ತಾಯಿ ಪುಷ್ಪವತಿ ಮನೆಯೊಳಗೆ ನಿದ್ರಿಸುತ್ತಿದ್ದ ವೇಳೆ ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ತಾಯಿಯು ಮೃತಪಟ್ಟ ನಂತರ, ಈ ಸಾವನ್ನು ಸಹಜ ಸಾವು ಎಂದು ಬಿಂಬಿಸಿ, ತ್ವರಿತವಾಗಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದಳು. ಗ್ರಾಮಸ್ಥರು ಮತ್ತು ಸ್ಥಳೀಯರು ಸಾವಿನ ಬಗ್ಗೆ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ರಹಸ್ಯ ಬಯಲಾಯಿತು. ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸುಚಿತ್ರಾಳನ್ನು ಬಂಧಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

9 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

17 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

17 hours ago