ರಾಜ್ಯ

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು !

ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ.

ಪುಷ್ಪಲತಾ (55) ಮೃತ ತಾಯಿ, ಸುಚಿತ್ರಾ (35) ಕೊಲೆಗೈದ ಮಗಳು. ತಾಯಿ ಪುಷ್ಪಲತಾ ಹೆಸರಲ್ಲಿ ಒಂದು ಮನೆ ಹಾಗೂ ಬ್ಯಾಂಕ್ ಖಾತೆಯಲ್ಲಿ 40 ಲಕ್ಷ ರೂಪಾಯಿ ಇತ್ತು. ಇದನ್ನು ಲಪಟಾಯಿಸಲು ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಆರೋಪಿ ಸುಚಿತ್ರಾ ತುಮಕೂರು ನಗರದ ಶ್ರೀನಗರದಲ್ಲಿ ತನ್ನ ಗಂಡನೊಂದಿಗೆ ವಾಸವಿದ್ದಳು. ಸುಮಾರು ಒಂದೂವರೆ ವರ್ಷಗಳ ಹಿಂದೆ ಸುಚಿತ್ರಾಳ ತಂದೆ ನಿಧನರಾಗಿದ್ದರು. ಈ ಸಾವಿಗೆ ತಾಯಿ ಪುಷ್ಪವತಿ ಕಾರಣ ಎನ್ನುವ ಶಂಕೆಯನ್ನು ಸುಚಿತ್ರಾಗೆ ಜ್ಯೋತಿಷಿ ಹೇಳಿದ್ದನು. ಆನ್​ಲೈನ್​​ನಲ್ಲಿ ಜ್ಯೋತಿಷಿಯನ್ನ ಸಂಪರ್ಕಿಸಿದ್ದ ಸುಚಿತ್ರಾ‌‌, ತಂದೆ ಸಾವಿಗೆ ನಿಮ್ಮ ತಾಯಿ ಮಾಟ ಮಾಡಿಸಿದ್ದಾಳೆ ಎಂಬ ಜ್ಯೋತಿಷ್ಯದ ಮಾತುಗಳನ್ನು ನಂಬಿದ್ದಳು ಎನ್ನಲಾಗಿದೆ.

ತಂದೆಯ ಸಾವಿಗೆ ತಾಯಿಯೇ ಕಾರಣ ಎಂದು ಜ್ಯೋತಿಷಿ ಹೇಳಿದ್ದ ಮಾತನ್ನು ನಂಬಿದ್ದ ಸುಚಿತ್ರಾ, ತಾಯಿ ಪುಷ್ಪವತಿ ಮನೆಯೊಳಗೆ ನಿದ್ರಿಸುತ್ತಿದ್ದ ವೇಳೆ ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ತಾಯಿಯು ಮೃತಪಟ್ಟ ನಂತರ, ಈ ಸಾವನ್ನು ಸಹಜ ಸಾವು ಎಂದು ಬಿಂಬಿಸಿ, ತ್ವರಿತವಾಗಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದಳು. ಗ್ರಾಮಸ್ಥರು ಮತ್ತು ಸ್ಥಳೀಯರು ಸಾವಿನ ಬಗ್ಗೆ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ರಹಸ್ಯ ಬಯಲಾಯಿತು. ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸುಚಿತ್ರಾಳನ್ನು ಬಂಧಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

4 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

4 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

4 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

5 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

17 hours ago