ರಾಜ್ಯ

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ. ಹೀಗಾಗಿ ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದರು.

ಅವರು ಇಂದು ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಮಾಧ್ಯಮಗೋಷ್ಠಿ ನೆಡೆಸಿ ಮಾತನಾಡಿದರು.

ಸಾದಿಕ್ ಪೈಲ್ವಾನ್ ಅವರು ನನಗೆ ಬಹಳ ವರ್ಷಗಳಿಂದ ಪರಿಚಯದವರಾಗಿದ್ದಾರೆ. ಮೈಸೂರಿನ ಕುಸ್ತಿ ಅಖಾಡಗಳಲ್ಲಿ ಅವರು ಪಾಲ್ಗೊಂಡಾಗ ಭೇಟಿಯಾಗುತ್ತಿದ್ದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಅಭ್ಯರ್ಥಿಯಾಗಬೇಕೆಂದು ಬಯಸುವುದು ತಪ್ಪೇನಿಲ್ಲ ಎಂದರು.

ನಿನ್ನೆ 11 ಜನ ನಾಮಪತ್ರ ಹಿಂಪಡೆದಿದ್ದಾರೆ. ಪಕ್ಷದ ಕೋರಿಕೆ ಮೇರೆಗೆ ಸಾದಿಕ್ ಅವರು ಕಣದಿಂದ ಹಿಂದೆ ಸರಿದಿರುವುದರಿಂದ ಅವರಿಗೆ ಮುಖ್ಯಮಂತ್ರಿಗಳು ಧನ್ಯವಾದ ಹೇಳಿದರು.

ಶಾಸಕ ರಿಜ್ವಾನ್ ಅರ್ಷದ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಅವರು ದಾವಣಗೆರೆಗೆ ಭೇಟಿ ನೀಡಿದ್ದರು. ಅವರು ತಲುಪುವುದು ತಡವಾದ್ದರಿಂದ ನಾಮ ಪತ್ರ ಸಲ್ಲಿಸುವುದನ್ನು ತಡೆಯಲು ಸಾಧ್ಯವಾಗಲಿಲ್ಲ.‌ ವಿಧಾನಪರಿಷತ್ ನಲ್ಲಿ ಉತ್ತರ ನೀಡಬೇಕಿದ್ದರಿಂದ ನಾನು ಖುದ್ದು ಭೇಟಿ ನೀಡಲಾಗಿಲ್ಲ ಎಂದರು.

ಪಕ್ಷದ ಕಟ್ಟಾಳು; ನಿಷ್ಠಾವಂತ ಕಾರ್ಯಕರ್ತರು
ಸಾದಿಕ್ ಪೈಲ್ವಾನ್ ಅವರು ಕಾಂಗ್ರೆಸ್ ನಲ್ಲಿ ಸುಮಾರು 40 ವರ್ಷಗಳಿಂದ ಇದ್ದು, ಪಕ್ಷದ ಕಟ್ಟಾಳು, ದಾವಣಗೆರೆಯಲ್ಲಿ 70 ಸಾವಿರ ಮುಸ್ಲಿಂ ಮತದಾರರಿದ್ದು, ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಹೈಕಮಾಂಡ್ ಇದನ್ನು ಪರಿಶೀಲಿಸಿ, ಮೃತರಾದವರ ಕುಟುಂಬದವರಿಗೆ ಟಿಕೆಟ್ ನೀಡುವ ಪದ್ಧತಿಯಂತೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ್ ಅವರಿಗೆ ಟಿಕೆಟ್ ನೀಡಲಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

51 mins ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

56 mins ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

4 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

4 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

4 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

4 hours ago