ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಯಿಂದ ಜಿಲ್ಲೆಗಳಲ್ಲಿ ಆಗಿರುವ ಅನಾಹುತ ಕುರಿತು ಸಿಎಂ ಸಿದ್ದರಾಮಯ್ಯ ಅವರಿಂದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಓಗಳ ಜೊತೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಡಿಯೋ ಸಂವಾದ ನಡೆಸಿ ಮಳೆಹಾನಿ ಬಗ್ಗೆ ಸಂಪೂರ್ಣ ವಿವರ ಪಡೆದುಕೊಂಡಿದ್ದಾರೆ.
ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಸ್ವತಃ ಭೇಟಿ ನೀಡಿ ಯಾವುದೇ ಅನಾಹುತ ಸಂಭವಿಸಿದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದರು.
ಅತಿವೃಷ್ಟಿಯಿಂದಾಗಿ 19 ದೊಡ್ಡ ಜಾನುವಾರುಗಳು, 66 ಸಣ್ಣ ಜಾನುವಾರುಗಳು ಸಾವನ್ನಪ್ಪಿವೆ. ಅವುಗಳಿಗೆ ತುರ್ತು ಪರಿಹಾರ ಪಾವತಿಸಲಾಗಿದೆ ಎಂದರು.
ಇನ್ನು ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ಒದಗಿಸಲು ಸೂಚನೆ ನೀಡಿದ ಅವರು, ಪೂರ್ತಿ ಹಾನಿಗೀಡಾದ ಮನೆಗೆ 1.20ಲಕ್ಷ ರೂ ಪರಿಹಾರ ನೀಡುವಂತೆ ಸೂಚನೆ ನೀಡಿದರು.
ಇನ್ನು ಹೆಚ್ಚುವರಿ ಬಿತ್ತನೆಗೆ ರೈತರಿಂದ ಬಿತ್ತನೆ ಬೀಜಕ್ಕೆ ಬೇಡಿಕೆ ಬಂದರೆ ಅದನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇನ್ನು ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶವಿದ್ದು, ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…