ರಾಜ್ಯ

ಏ.15 ರಿಂದ ಲಾರಿ ಮುಷ್ಕರ| ರಾಜಕೀಯಕ್ಕೆ ಮಣಿದು ಮುಷ್ಕರ ಮಾಡೋದು ಸರಿಯಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ರಾಮನಗರ/ಕನಕಪುರ: ಲಾರಿ ಮಾಲೀಕರು ರಾಜಕೀಯ ಒತ್ತಡಕ್ಕೆ ಮಣಿದು ಏಪ್ರಿಲ್‌.15ರಿಂದ ಮುಷ್ಕರ ಮಾಡೋದು ಸರಿಯಲ್ಲ. ಮುಷ್ಕರ ಮಾಡೋದರಿಂದ ನಿಮಗೆಯೇ ಅನೇಕ ನಷ್ಟವಾಗುತ್ತದೆ. ಹಾಗಾಗಿ ಯಾವುದೇ ಮುಷ್ಕರ ಮಾಡಬೇಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಮನವಿ ಮಾಡಿದ್ದಾರೆ.

ಕನಕಪುರದಲ್ಲಿ ಇಂದು(ಏಪ್ರಿಲ್‌.6) ಡಿಸೇಲ್‌ ದರ ಏರಿಕೆ ಕಾರಣ ಲಾರಿ ಮುಷ್ಕರಕ್ಕೆ ಕರೆ ನೀಡಿರುವ ವಿಚಾರದ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಲಾರಿ ಮಾಲೀಕರು ಮುಷ್ಕರ ಮಾಡುತ್ತಾರೆಂ ಮಾಹಿತಿ ನನಗೆ ಇಲ್ಲ. ಈ ಹಿಂದೆ ಪೆಟ್ರೋಲ್‌ ಮತ್ತು ಡಿಸೇಲ್‌ ದರ ಏರಿಕೆಯಾಗಿತ್ತು. ಆಗ ಅವರು ಯಾಕೆ ಮುಷ್ಕರ ಮಾಡಲಿಲ್ಲ? ಆದರೆ ಇದೀಗ ರಾಜಕೀಯ ಕಾರಣಕ್ಕಾಗಿ ಮುಷ್ಕರ ಮಾಡುತ್ತೇವೆಂದು ಹೇಳುತ್ತಿದ್ದಾರೆ. ನಾನು ಈಗಲೂ ಅವರಲ್ಲಿ ಮನವ ಮಾಡುತ್ತೇನೆ, ರಾಜಕೀಯಕ್ಕೆ ಮಣಿದು ಲಾರಿ ಮುಷ್ಕರ ಮಾಡುವುದು ಸರಿಯಲ್ಲ ಎಂದರು.

ಲಾರಿ ಮಾಲೀಕರು ಸರ್ಕಾರದೊಂದಿಗೆ ಇರಬೇಕು. ಆದರೆ ಅವರೇ ಮುಷ್ಕರ ಮಾಡುತ್ತೀವೆಂದು ಹೇಳುತ್ತಿದ್ದಾರೆ. ಇದರಿಂದ ಅವರಿಗೆ ನಷ್ಟ ಆಗುತ್ತದೆ. ಅಲ್ಲದೇ ಒಂದು ಮುಷ್ಕರ ಮಾಡಿದರೆ ಅದರ ನಷ್ಟ ಭರಿಸಲು ನಿಮ್ಮಿಂದ ಸಾಧ್ಯವಿಲ್ಲ. ಹೀಗಾಗಿ ಯಾವುದೇ ಮುಷ್ಕರ ಮಾಡಬೇಡಿ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

27ನೇ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಅಜ್ಜಿಕುಟ್ಟಿರ ನೇತೃತ್ವ

ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…

20 mins ago

ಕಬಿನಿ ಹಿನ್ನೀರಿಗೆ ಹಿಂಡು ಹಿಂಡಾಗಿ ವನ್ಯಪ್ರಾಣಿಗಳ ಲಗ್ಗೆ

ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…

26 mins ago

ನೀರಿನ ಪೈಪ್‌ಲೈನ್ ಅಳವಡಿಕೆ ಚುರುಕು

  ೧೦೦ ಕಿ.ಮೀ.ಹೆಚ್‌ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…

31 mins ago

ಜೂ.20ರಿಂದ ಎಸ್‌ಐಆರ್; ಮತದಾರರಲ್ಲಿ ಇರಲಿ ಜಾಗ್ರತೆ

ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್‌ಒಗಳು ಮೈಸೂರು:ಕಳೆದ ಎಲೆಕ್ಷನ್‌ನಲ್ಲಿ ಇದೇ ಬೂತ್‌ನಲ್ಲಿ ವೋಟ್ ಮಾಡಿದ್ದೆ,…

1 hour ago

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

13 hours ago