ರಾಮನಗರ/ಕನಕಪುರ: ಲಾರಿ ಮಾಲೀಕರು ರಾಜಕೀಯ ಒತ್ತಡಕ್ಕೆ ಮಣಿದು ಏಪ್ರಿಲ್.15ರಿಂದ ಮುಷ್ಕರ ಮಾಡೋದು ಸರಿಯಲ್ಲ. ಮುಷ್ಕರ ಮಾಡೋದರಿಂದ ನಿಮಗೆಯೇ ಅನೇಕ ನಷ್ಟವಾಗುತ್ತದೆ. ಹಾಗಾಗಿ ಯಾವುದೇ ಮುಷ್ಕರ ಮಾಡಬೇಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.
ಕನಕಪುರದಲ್ಲಿ ಇಂದು(ಏಪ್ರಿಲ್.6) ಡಿಸೇಲ್ ದರ ಏರಿಕೆ ಕಾರಣ ಲಾರಿ ಮುಷ್ಕರಕ್ಕೆ ಕರೆ ನೀಡಿರುವ ವಿಚಾರದ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಲಾರಿ ಮಾಲೀಕರು ಮುಷ್ಕರ ಮಾಡುತ್ತಾರೆಂ ಮಾಹಿತಿ ನನಗೆ ಇಲ್ಲ. ಈ ಹಿಂದೆ ಪೆಟ್ರೋಲ್ ಮತ್ತು ಡಿಸೇಲ್ ದರ ಏರಿಕೆಯಾಗಿತ್ತು. ಆಗ ಅವರು ಯಾಕೆ ಮುಷ್ಕರ ಮಾಡಲಿಲ್ಲ? ಆದರೆ ಇದೀಗ ರಾಜಕೀಯ ಕಾರಣಕ್ಕಾಗಿ ಮುಷ್ಕರ ಮಾಡುತ್ತೇವೆಂದು ಹೇಳುತ್ತಿದ್ದಾರೆ. ನಾನು ಈಗಲೂ ಅವರಲ್ಲಿ ಮನವ ಮಾಡುತ್ತೇನೆ, ರಾಜಕೀಯಕ್ಕೆ ಮಣಿದು ಲಾರಿ ಮುಷ್ಕರ ಮಾಡುವುದು ಸರಿಯಲ್ಲ ಎಂದರು.
ಲಾರಿ ಮಾಲೀಕರು ಸರ್ಕಾರದೊಂದಿಗೆ ಇರಬೇಕು. ಆದರೆ ಅವರೇ ಮುಷ್ಕರ ಮಾಡುತ್ತೀವೆಂದು ಹೇಳುತ್ತಿದ್ದಾರೆ. ಇದರಿಂದ ಅವರಿಗೆ ನಷ್ಟ ಆಗುತ್ತದೆ. ಅಲ್ಲದೇ ಒಂದು ಮುಷ್ಕರ ಮಾಡಿದರೆ ಅದರ ನಷ್ಟ ಭರಿಸಲು ನಿಮ್ಮಿಂದ ಸಾಧ್ಯವಿಲ್ಲ. ಹೀಗಾಗಿ ಯಾವುದೇ ಮುಷ್ಕರ ಮಾಡಬೇಡಿ ಎಂದು ಹೇಳಿದರು.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…