ರಾಜ್ಯ

ಏ.15 ರಿಂದ ಲಾರಿ ಮುಷ್ಕರ| ರಾಜಕೀಯಕ್ಕೆ ಮಣಿದು ಮುಷ್ಕರ ಮಾಡೋದು ಸರಿಯಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ರಾಮನಗರ/ಕನಕಪುರ: ಲಾರಿ ಮಾಲೀಕರು ರಾಜಕೀಯ ಒತ್ತಡಕ್ಕೆ ಮಣಿದು ಏಪ್ರಿಲ್‌.15ರಿಂದ ಮುಷ್ಕರ ಮಾಡೋದು ಸರಿಯಲ್ಲ. ಮುಷ್ಕರ ಮಾಡೋದರಿಂದ ನಿಮಗೆಯೇ ಅನೇಕ ನಷ್ಟವಾಗುತ್ತದೆ. ಹಾಗಾಗಿ ಯಾವುದೇ ಮುಷ್ಕರ ಮಾಡಬೇಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಮನವಿ ಮಾಡಿದ್ದಾರೆ.

ಕನಕಪುರದಲ್ಲಿ ಇಂದು(ಏಪ್ರಿಲ್‌.6) ಡಿಸೇಲ್‌ ದರ ಏರಿಕೆ ಕಾರಣ ಲಾರಿ ಮುಷ್ಕರಕ್ಕೆ ಕರೆ ನೀಡಿರುವ ವಿಚಾರದ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಲಾರಿ ಮಾಲೀಕರು ಮುಷ್ಕರ ಮಾಡುತ್ತಾರೆಂ ಮಾಹಿತಿ ನನಗೆ ಇಲ್ಲ. ಈ ಹಿಂದೆ ಪೆಟ್ರೋಲ್‌ ಮತ್ತು ಡಿಸೇಲ್‌ ದರ ಏರಿಕೆಯಾಗಿತ್ತು. ಆಗ ಅವರು ಯಾಕೆ ಮುಷ್ಕರ ಮಾಡಲಿಲ್ಲ? ಆದರೆ ಇದೀಗ ರಾಜಕೀಯ ಕಾರಣಕ್ಕಾಗಿ ಮುಷ್ಕರ ಮಾಡುತ್ತೇವೆಂದು ಹೇಳುತ್ತಿದ್ದಾರೆ. ನಾನು ಈಗಲೂ ಅವರಲ್ಲಿ ಮನವ ಮಾಡುತ್ತೇನೆ, ರಾಜಕೀಯಕ್ಕೆ ಮಣಿದು ಲಾರಿ ಮುಷ್ಕರ ಮಾಡುವುದು ಸರಿಯಲ್ಲ ಎಂದರು.

ಲಾರಿ ಮಾಲೀಕರು ಸರ್ಕಾರದೊಂದಿಗೆ ಇರಬೇಕು. ಆದರೆ ಅವರೇ ಮುಷ್ಕರ ಮಾಡುತ್ತೀವೆಂದು ಹೇಳುತ್ತಿದ್ದಾರೆ. ಇದರಿಂದ ಅವರಿಗೆ ನಷ್ಟ ಆಗುತ್ತದೆ. ಅಲ್ಲದೇ ಒಂದು ಮುಷ್ಕರ ಮಾಡಿದರೆ ಅದರ ನಷ್ಟ ಭರಿಸಲು ನಿಮ್ಮಿಂದ ಸಾಧ್ಯವಿಲ್ಲ. ಹೀಗಾಗಿ ಯಾವುದೇ ಮುಷ್ಕರ ಮಾಡಬೇಡಿ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

3 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

6 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

10 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

12 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

13 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

14 hours ago