ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಕೆ ಮಾಡಿದ್ದು, ಕಾಂಗ್ರೆಸ್ ಪಕ್ಷದ ಶಾಸಕರಿಗೆ ಡಿನ್ನರ್ ಪಾರ್ಟಿ ಆಯೋಜಿಸಲು ಮುಂದಾಗಿದ್ದಾರೆ.
ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಿಎಂ ಬದಲಾವಣೆ ಚರ್ಚೆ ಮುಂಚೂಣಿಯಲ್ಲಿ ಆಗಾಗ ಚರ್ಚೆಯಾಗಿತ್ತು. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿ ಮುಗಿಯುವರೆಗೂ ನಾನೇ ಮುಖ್ಯಮಂತ್ರಿಯಾಗಿರುತ್ತೇನೆಂದು ಪುನರ್ ಉಚ್ಚಾರ ಮಾಡಿದ್ದರು. ಇದರ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಸಿದ ವಿಚಾರವನ್ನು ಮುಂದಿಟ್ಟುಕೊಂಡು ಶಾಸಕರಿಗೆ ಡಿನ್ನರ್ ಪಾರ್ಟಿ ಆಯೋಜಿಸಲು ಮುಂದಾಗಿರುವ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಡಿನ್ನರ್ ಪಾರ್ಟಿ ಯಾವಾಗ?
ಕೆಪಿಸಿಸಿ ಪದಾಧಿಕಾರಿಗಳು, ಡಿಸಿಸಿ ಅಧ್ಯಕ್ಷರುಗಳು ಹಾಗೂ ಮುಂಚೂಣಿ ಘಟಕಗಳ ಅಧ್ಯಕ್ಷರಿಗೆ ಮಾರ್ಚ್.15ರಂದು ಖಾಸಗಿ ಹೋಟೆಲ್ನಲ್ಲಿ ಡಿನ್ನರ್ ಪಾರ್ಟಿಯನ್ನು ಆಯೋಜಿಸುವ ಸಾಧ್ಯತೆಯಿದೆ. ಅಲ್ಲದೇ ಈ ವೇಳೆ ಡಿ.ಕೆ.ಶಿವಕುಮಾರ್ ಅವರು ಇವೆಲ್ಲರ ವಿಶ್ವಾಸಗಳಿಸುವ ಚಿಂತನೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…