ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಇದೇ ಜನವರಿ.21ರಂದು ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಾಂಧಿ ಭಾರತ ಕಾರ್ಯಕ್ರಮವನ್ನು ಪಕ್ಷ ಈಗಾಗಲೇ ಆರಂಭಿಸಿದ್ದು, ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಕಳೆದ ಡಿಸಂಬರ್.26ಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗಿತ್ತು. ಅಂದು ಸಂಜೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನರಾದ ಹಿನ್ನೆಲೆಯಲ್ಲಿ ಮರುದಿನದ ಕಾರ್ಯಕ್ರಮಗಳನ್ನು ಮುಂದೂಡಲಾಗಿತ್ತು ಎಂದರು.
ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಮ್ಮ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಮಾಡಲಾಗಿತ್ತು. ನಮ್ಮ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿಗಳು ಚರ್ಚೆ ಮಾಡಿ ಇದೇ ತಿಂಗಳ 21ರಂದು ಈ ಕಾರ್ಯಕ್ರಮ ನಡೆಸಲು ತೀರ್ಮಾನಿಸಿದ್ದಾರೆ. 1924ರ ಕಾಂಗ್ರೆಸ್ ಅಧಿವೇಶನದ ಕುರಿತ ಮಾಹಿತಿಗಳ ಪುಸ್ತಕ ಹಾಗೂ ಇತರೆ ಪುಸ್ತಕಗಳನ್ನು ಜ.21ರಂದು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಜನವರಿ.21ರಂದು ಬೆಳಗ್ಗೆ ಸುವರ್ಣಸೌಧದ ಬಳಿ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷದ ಶಾಸಕರಿಗೂ ಆಹ್ವಾನ ನೀಡಲಾಗುವುದು. ಅಂದು ಮಧ್ಯಾಹ್ನ 12 ಗಂಟೆಗೆ “ಜೈ ಬಾಪು, ಜೈ ಭೀಮ್, ಜೈ ಸಂವಿಧಾನ” ಎಂಬ ಎಐಸಿಸಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶಕ್ಕೆ ಎಲ್ಲಾ ವಿಧಾನಸಭಾ ಕ್ಷೇತ್ರದಿಂದ ಕನಿಷ್ಠ 100 ಮಂದಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಬೇಕು ಎಂದು ಕರೆ ನೀಡುತ್ತಿದ್ದೇವೆ. ಈ ಸಮಾವೇಶದಲ್ಲಿ ಭಾಗವಹಿಸುವ ನಾಯಕರ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…