ರಾಜ್ಯ

ಮಹಾಕುಂಭಮೇಳದ ನೀರಿಗೆ ಜಾತಿ, ಧರ್ಮ, ಪಾರ್ಟಿ ಇದೆಯಾ?: ಡಿಸಿಎಂ ಡಿ.ಕೆ.ಶಿವಕುಮಾರ್‌

ಉಡುಪಿ: ನಾನು ಮಹಾಕುಂಭಮೇಳದಲ್ಲಿ ಭಾಗಯಾದರೆ ತಪ್ಪೇನಿದೆ, ಆ ನೀರಿಗೆ ಜಾತಿ, ಧರ್ಮ ಹಾಗೂ ಪಾರ್ಟಿ ಇದೆಯಾ ಎಂದು ಸ್ವಪಕ್ಷದ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಉಡುಪಿಯಲ್ಲಿ ಇಂದು(ಮಾರ್ಚ್‌.2) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಪ್ರಯಾಗ್‌ ರಾಜ್‌ನ ಮಹಾ ಕುಂಭಮೇಳಕ್ಕೆ ಹೋಗಿದ್ದೆ, ಅಂತೆಯೇ ಟಿ.ನರಸೀಪುರದಲ್ಲಿ ನಡೆದ ಕುಂಭಮೇಳದಲ್ಲೂ ಭಾಗಿಯಾಗಿದ್ದೇನೆ ಅದರಲ್ಲಿ ತಪ್ಪೇನಿದೆ? ಯಾರು ಯಾವ್ಯಾವ ಲೆಕ್ಕಚಾರವನ್ನು ಬೇಕಾದರೂ ಹಾಕಿಕೊಳ್ಳಲಿ. ಅದರ ಅವಶ್ಯಕತೆ ಆಗಲಿ ಅಥವಾ ಲೆಕ್ಕಚಾರದ ಅವಶ್ಯಕತೆ ಆಗಲಿ ನನಗೆ ಬೇಕಾಗಿಲ್ಲ ಎಂದು ತಮ್ಮ ವಿರೋಧಿಗಳಿಗೆ ಟಾಂಗ್‌ ನೀಡಿದರು.

ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಹೇಳಿಕೆಗಳ ಬಗ್ಗೆ ಮಾತನಾಡಿದ ಅವರು, ನಾನು ಯಾವ ದೇವಾಲಯಕ್ಕೆ ಹೋದರೂ, ಯಾವ ಧಾರ್ಮಿಕ ವಿಚಾರ ಮಾತನಾಡಿದರೂ ಸಂಚಲನವಾಗುತ್ತದೆ. ನಿಮ್ಮ ಜಿಲ್ಲೆಯವರೇ ನನ್ನನ್ನು ಯೇಸು ಕುಮಾರ ಎಂದಿದ್ದರು. ಯೇಸುವಿನ ಶಿಲಾಮೂರ್ತಿಗೆ ನಾನು ಪ್ರೋತ್ಸಾಹ ಕೊಟ್ಟೆ ಎಂಬ ಕಾರಣಕ್ಕೆ ಹೀಗೆ ಹೇಳಿದ್ದರು. ಯಾರೋ ಒಬ್ಬ ಎಂಪಿ ಅವರು ಮುಸಲ್ಮಾನರ ಎದೆ ಸೀಳಿದರೆ ಮೂರು ಅಕ್ಷರ ಇಲ್ಲ ಅಂದಿದ್ದರು. ಅಲ್ಲದೇ ಅವರು ಕೇವಲ ಪಂಚರ್ ಹಾಕೋಕೆ ಲಾಯಕ್ಕು ಎಂದಿದ್ದ. ಅದಕ್ಕೆ ನಾನು ಪ್ರತಿಕ್ರಿಯೆ ನೀಡಿ, ಅವರೆಲ್ಲ ನಮ್ಮ ಬ್ರದರ್ಸ್‌, ಅವರಿಲ್ಲದೆ ಬದುಕೋಕೆ ಆಗಲ್ಲ ಎಂದಿದ್ದೆ ಎಂದು ಹೇಳಿದರು.

ಇನ್ಮು ನಾವು ಚಿಕನ್ನು ಮತ್ತು ಮಟನ್ನು ಕಡಿಯೋಕೆ ಆಗುತ್ತಾ? ಮುಸಲ್ಮಾನರೇ ಕಡಿಯುವುದು. ಯಾರು ಯಾವ ಕೆಲಸ ನಿರ್ವಹಿಸಬೇಕೋ ಅವರು ಅದನ್ನೇ ಮಾಡಬೇಕು, ಅದನ್ನೇ ಮಾಡುತ್ತಾರೆ. ಅವರನ್ನು ಬ್ರದರ್ಸ್ ಅಂದಿದ್ದಕ್ಕೆ ನನ್ನನ್ನು ಇನ್ನೊಂದು ಹೆಸರಲ್ಲಿ ಕರೆದರು ಎಂದು ವಾಗ್ದಾಳಿ ನಡೆಸಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

2 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

2 hours ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

2 hours ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

2 hours ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

2 hours ago