ರಾಜ್ಯ

ಮಹಾಕುಂಭಮೇಳದ ನೀರಿಗೆ ಜಾತಿ, ಧರ್ಮ, ಪಾರ್ಟಿ ಇದೆಯಾ?: ಡಿಸಿಎಂ ಡಿ.ಕೆ.ಶಿವಕುಮಾರ್‌

ಉಡುಪಿ: ನಾನು ಮಹಾಕುಂಭಮೇಳದಲ್ಲಿ ಭಾಗಯಾದರೆ ತಪ್ಪೇನಿದೆ, ಆ ನೀರಿಗೆ ಜಾತಿ, ಧರ್ಮ ಹಾಗೂ ಪಾರ್ಟಿ ಇದೆಯಾ ಎಂದು ಸ್ವಪಕ್ಷದ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಉಡುಪಿಯಲ್ಲಿ ಇಂದು(ಮಾರ್ಚ್‌.2) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಪ್ರಯಾಗ್‌ ರಾಜ್‌ನ ಮಹಾ ಕುಂಭಮೇಳಕ್ಕೆ ಹೋಗಿದ್ದೆ, ಅಂತೆಯೇ ಟಿ.ನರಸೀಪುರದಲ್ಲಿ ನಡೆದ ಕುಂಭಮೇಳದಲ್ಲೂ ಭಾಗಿಯಾಗಿದ್ದೇನೆ ಅದರಲ್ಲಿ ತಪ್ಪೇನಿದೆ? ಯಾರು ಯಾವ್ಯಾವ ಲೆಕ್ಕಚಾರವನ್ನು ಬೇಕಾದರೂ ಹಾಕಿಕೊಳ್ಳಲಿ. ಅದರ ಅವಶ್ಯಕತೆ ಆಗಲಿ ಅಥವಾ ಲೆಕ್ಕಚಾರದ ಅವಶ್ಯಕತೆ ಆಗಲಿ ನನಗೆ ಬೇಕಾಗಿಲ್ಲ ಎಂದು ತಮ್ಮ ವಿರೋಧಿಗಳಿಗೆ ಟಾಂಗ್‌ ನೀಡಿದರು.

ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಹೇಳಿಕೆಗಳ ಬಗ್ಗೆ ಮಾತನಾಡಿದ ಅವರು, ನಾನು ಯಾವ ದೇವಾಲಯಕ್ಕೆ ಹೋದರೂ, ಯಾವ ಧಾರ್ಮಿಕ ವಿಚಾರ ಮಾತನಾಡಿದರೂ ಸಂಚಲನವಾಗುತ್ತದೆ. ನಿಮ್ಮ ಜಿಲ್ಲೆಯವರೇ ನನ್ನನ್ನು ಯೇಸು ಕುಮಾರ ಎಂದಿದ್ದರು. ಯೇಸುವಿನ ಶಿಲಾಮೂರ್ತಿಗೆ ನಾನು ಪ್ರೋತ್ಸಾಹ ಕೊಟ್ಟೆ ಎಂಬ ಕಾರಣಕ್ಕೆ ಹೀಗೆ ಹೇಳಿದ್ದರು. ಯಾರೋ ಒಬ್ಬ ಎಂಪಿ ಅವರು ಮುಸಲ್ಮಾನರ ಎದೆ ಸೀಳಿದರೆ ಮೂರು ಅಕ್ಷರ ಇಲ್ಲ ಅಂದಿದ್ದರು. ಅಲ್ಲದೇ ಅವರು ಕೇವಲ ಪಂಚರ್ ಹಾಕೋಕೆ ಲಾಯಕ್ಕು ಎಂದಿದ್ದ. ಅದಕ್ಕೆ ನಾನು ಪ್ರತಿಕ್ರಿಯೆ ನೀಡಿ, ಅವರೆಲ್ಲ ನಮ್ಮ ಬ್ರದರ್ಸ್‌, ಅವರಿಲ್ಲದೆ ಬದುಕೋಕೆ ಆಗಲ್ಲ ಎಂದಿದ್ದೆ ಎಂದು ಹೇಳಿದರು.

ಇನ್ಮು ನಾವು ಚಿಕನ್ನು ಮತ್ತು ಮಟನ್ನು ಕಡಿಯೋಕೆ ಆಗುತ್ತಾ? ಮುಸಲ್ಮಾನರೇ ಕಡಿಯುವುದು. ಯಾರು ಯಾವ ಕೆಲಸ ನಿರ್ವಹಿಸಬೇಕೋ ಅವರು ಅದನ್ನೇ ಮಾಡಬೇಕು, ಅದನ್ನೇ ಮಾಡುತ್ತಾರೆ. ಅವರನ್ನು ಬ್ರದರ್ಸ್ ಅಂದಿದ್ದಕ್ಕೆ ನನ್ನನ್ನು ಇನ್ನೊಂದು ಹೆಸರಲ್ಲಿ ಕರೆದರು ಎಂದು ವಾಗ್ದಾಳಿ ನಡೆಸಿದರು.

ಅರ್ಚನ ಎಸ್‌ ಎಸ್

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

6 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

6 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

8 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

8 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

8 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

16 hours ago