ರಾಜ್ಯ

ಮಹಾಕುಂಭಮೇಳದ ನೀರಿಗೆ ಜಾತಿ, ಧರ್ಮ, ಪಾರ್ಟಿ ಇದೆಯಾ?: ಡಿಸಿಎಂ ಡಿ.ಕೆ.ಶಿವಕುಮಾರ್‌

ಉಡುಪಿ: ನಾನು ಮಹಾಕುಂಭಮೇಳದಲ್ಲಿ ಭಾಗಯಾದರೆ ತಪ್ಪೇನಿದೆ, ಆ ನೀರಿಗೆ ಜಾತಿ, ಧರ್ಮ ಹಾಗೂ ಪಾರ್ಟಿ ಇದೆಯಾ ಎಂದು ಸ್ವಪಕ್ಷದ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಉಡುಪಿಯಲ್ಲಿ ಇಂದು(ಮಾರ್ಚ್‌.2) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಪ್ರಯಾಗ್‌ ರಾಜ್‌ನ ಮಹಾ ಕುಂಭಮೇಳಕ್ಕೆ ಹೋಗಿದ್ದೆ, ಅಂತೆಯೇ ಟಿ.ನರಸೀಪುರದಲ್ಲಿ ನಡೆದ ಕುಂಭಮೇಳದಲ್ಲೂ ಭಾಗಿಯಾಗಿದ್ದೇನೆ ಅದರಲ್ಲಿ ತಪ್ಪೇನಿದೆ? ಯಾರು ಯಾವ್ಯಾವ ಲೆಕ್ಕಚಾರವನ್ನು ಬೇಕಾದರೂ ಹಾಕಿಕೊಳ್ಳಲಿ. ಅದರ ಅವಶ್ಯಕತೆ ಆಗಲಿ ಅಥವಾ ಲೆಕ್ಕಚಾರದ ಅವಶ್ಯಕತೆ ಆಗಲಿ ನನಗೆ ಬೇಕಾಗಿಲ್ಲ ಎಂದು ತಮ್ಮ ವಿರೋಧಿಗಳಿಗೆ ಟಾಂಗ್‌ ನೀಡಿದರು.

ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಹೇಳಿಕೆಗಳ ಬಗ್ಗೆ ಮಾತನಾಡಿದ ಅವರು, ನಾನು ಯಾವ ದೇವಾಲಯಕ್ಕೆ ಹೋದರೂ, ಯಾವ ಧಾರ್ಮಿಕ ವಿಚಾರ ಮಾತನಾಡಿದರೂ ಸಂಚಲನವಾಗುತ್ತದೆ. ನಿಮ್ಮ ಜಿಲ್ಲೆಯವರೇ ನನ್ನನ್ನು ಯೇಸು ಕುಮಾರ ಎಂದಿದ್ದರು. ಯೇಸುವಿನ ಶಿಲಾಮೂರ್ತಿಗೆ ನಾನು ಪ್ರೋತ್ಸಾಹ ಕೊಟ್ಟೆ ಎಂಬ ಕಾರಣಕ್ಕೆ ಹೀಗೆ ಹೇಳಿದ್ದರು. ಯಾರೋ ಒಬ್ಬ ಎಂಪಿ ಅವರು ಮುಸಲ್ಮಾನರ ಎದೆ ಸೀಳಿದರೆ ಮೂರು ಅಕ್ಷರ ಇಲ್ಲ ಅಂದಿದ್ದರು. ಅಲ್ಲದೇ ಅವರು ಕೇವಲ ಪಂಚರ್ ಹಾಕೋಕೆ ಲಾಯಕ್ಕು ಎಂದಿದ್ದ. ಅದಕ್ಕೆ ನಾನು ಪ್ರತಿಕ್ರಿಯೆ ನೀಡಿ, ಅವರೆಲ್ಲ ನಮ್ಮ ಬ್ರದರ್ಸ್‌, ಅವರಿಲ್ಲದೆ ಬದುಕೋಕೆ ಆಗಲ್ಲ ಎಂದಿದ್ದೆ ಎಂದು ಹೇಳಿದರು.

ಇನ್ಮು ನಾವು ಚಿಕನ್ನು ಮತ್ತು ಮಟನ್ನು ಕಡಿಯೋಕೆ ಆಗುತ್ತಾ? ಮುಸಲ್ಮಾನರೇ ಕಡಿಯುವುದು. ಯಾರು ಯಾವ ಕೆಲಸ ನಿರ್ವಹಿಸಬೇಕೋ ಅವರು ಅದನ್ನೇ ಮಾಡಬೇಕು, ಅದನ್ನೇ ಮಾಡುತ್ತಾರೆ. ಅವರನ್ನು ಬ್ರದರ್ಸ್ ಅಂದಿದ್ದಕ್ಕೆ ನನ್ನನ್ನು ಇನ್ನೊಂದು ಹೆಸರಲ್ಲಿ ಕರೆದರು ಎಂದು ವಾಗ್ದಾಳಿ ನಡೆಸಿದರು.

ಅರ್ಚನ ಎಸ್‌ ಎಸ್

Recent Posts

ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಪಂಚಾಯಿತಿ ಚುನಾವಣೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಜ್ಯದ ಬಹುತೇಕ ಪಂಚಾಯ್ತಿಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…

49 mins ago

ಮಡಿಕೇರಿ: ಸ್ಟಾಕ್‌ ಮಾರ್ಕೆಟ್‌ನಲ್ಲಿ ಲಾಸ್:‌ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ. ಕವನ್(‌24) ಆತ್ಮಹತ್ಯೆ ಮಾಡಿಕೊಂಡಿರುವ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ : ದೇಶವನ್ನು ಒಂದುಗೂಡಿಸಿದ ಖಾದಿ ಮಂತ್ರ

ಡಾ.ಪ್ರಮೀಳಾದೇವಿ ಬಿ.ಕೆ ಖಾದಿಯಿಂದ ದೇಶವನ್ನು ಒಂದು ಗೂಡಿಸುವುದು ಸಾಧ್ಯವೇ? ಇಂದು ಸಾಮಾನ್ಯವಾಗಿ ಕೇಳಬಹುದಾದ ಪ್ರಶ್ನೆ. ಸ್ವಾತಂತ್ರ್ಯ ಬಂದು ಏಳು ದಶಕ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ : ನಿದ್ದೆ ಇಲ್ಲದ ಇಂಗ್ಲೆಂಡಿನ ಮೊದಲ ದಿನಗಳು

ಜಹಜಿನಲ್ಲಿ ನನಗೆ ಸಮುದ್ರ ಪ್ರಯಾಣದ ಯಾವ ತೊಂದರೆಯೂ ಆಗಲಿಲ್ಲ. ದಿನಗಳು ಕಳೆದಂತೆಲ್ಲ ನನ್ನ ಮನಸ್ಸು ಸಂದಿಗ್ಧ ಪರಿಸ್ಥಿತಿಗೆ ಬೀಳತೊಡಗಿದ್ದಿತು. ಹಡಗಿನ…

6 hours ago

ಮಳೆಗಾಲದಲ್ಲೇ ವೈಟ್‌ ಟಾಪಿಂಗ್‌ ಆಗಬೇಕೆ?

ವಸಂತ್‌ ಕುಮಾರ್‌, ಮೈಸೂರು ಮಠ ಪ್ರತಿ ವರ್ಷವೂ ಪಾಲಿಕೆಯ ಬಜೆಟ್‌ನಲ್ಲಿ ರಸ್ತೆ ದುರಸ್ತಿಗಾಗಿ ಇಂತಿಷ್ಟು ಹಣವನ್ನು ನಿಗದಿಪಡಿಸಲಾಗುತ್ತದೆ. ೨೦೨೪-೨೦೨೫ರಲ್ಲಿ ಕೊಟ್ಟ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 11 , ಶನಿವಾರ

7 hours ago