ಉಡುಪಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ಯಾಂಡಲ್ವುಡ್ ಕಲಾವಿದರಿಗೆ ವಾರ್ನಿಂಗ್ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ರಾಜಕೀಯ ನಾಯಕರು, ನಟ ಮತ್ತು ನಟಿಯರ ಪರ-ವಿರೋಧ ವ್ಯಕ್ತವಾದ ಬೆನ್ನಲ್ಲೇ ಡಿಕೆಶಿ ಅವರು ತಮ್ಮ ಹೇಳಿಕೆಗಳಿಗೆ ಸ್ಪಷ್ಟನೆ ನೀಡಿದ್ದಾರೆ.
ಉಡುಪಿಯಲ್ಲಿ ಇಂದು(ಮಾರ್ಚ್.2) ಈ ಕುರಿತು ಮಾಧ್ಯಮಗಳೊಂದಗೆ ಪ್ರತಿಕ್ರಿಯೆ ನೀಡಿದ ಅವರು, ನಟರು ಏನು ಬೇಕಾದರೂ ಮಾತನಾಡಿಕೊಳ್ಳಲಿ, ನನಗೆ ಗೊತ್ತಿರುವಷ್ಟು ಸತ್ಯ ನಾನು ಹೇಳಿದ್ದೇನೆ. ಕಲಾವಿದರು ಬೇಕಾದರೆ ಹೋರಾಟ ಮಾಡಲಿ, ಮೇಕೆದಾಟು ಯಾತ್ರೆ ಮಾಡುವಾಗ ಯಾರು ಬಂದಿರಲಿಲ್ಲ. ಅದನ್ನೇ ನಾನು ನಿನ್ನೆ ಹೇಳಿದ್ದು, ಫಿಲ್ಮ್ ಫೆಸ್ಟಿವಲ್ ಏನೂ ನನ್ನ ಕಾರ್ಯಕ್ರಮನಾ? ಎಂದು ತಮ್ಮ ಹೇಳಿಕೆಗಳನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.
ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗಳಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಶಾಸಕ ಮುನಿರತ್ನ, ನಟಿ ತಾರಾ ಅನುರಾಧ, ನಿರ್ದೇಶಕ ಟಿ.ಎಸ್.ನಾಗಾಭರಣ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಡಿಕೆಶಿ ಅವರ ಹೇಳಿಕೆಗಳನ್ನು ಶಾಸಕ ಗಣಿಗ ರವಿ, ನಿರ್ಮಾಪಕ ಕೆ.ಮಂಜು ಹಾಗೂ ನಟಿ ಹೇಮಾ ಚೌಧರಿ ಅವರು ಸರ್ಮಥನೆ ಮಾಡಿಕೊಂಡಿದ್ದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…