ರಾಜ್ಯ

ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು

ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್‌ ಕಾಲೋನಿ ಹಾಗೂ ವಸೀಮ್‌ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್‌ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

ಇದನ್ನು ಓದಿ: ಉತ್ತರ ಪ್ರದೇಶದಂತೆ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆ ಧ್ವಂಸ: ಕರ್ನಾಟಕದ ವಿರುದ್ಧ ಪಿಣರಾಯಿ ವಿಜಯನ್‌ ಆಕ್ರೋಶ

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇರಳ ಸಿಎಂ ವಾಸ್ತವ ಅರ್ಥ ಮಾಡಿಕೊಳ್ಳದೇ ಮಾತನಾಡಿದ್ದಾರೆ. ಕೆಲವರು ಟಂಪ್‌ ಸೈಟ್‌ನಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದರು. ಅಧಿಕಾರಿಗಳು ಅದನ್ನು ತೆರವು ಮಾಡಿದ್ದಾರೆ. ಮನೆ ಕಳೆದುಕೊಂಡವರಿಗೆ ನಾವು ಮನೆ ಹಂಚಿಕೆ ಮಾಡುತ್ತೇವೆ. ರಾಜೀವ್‌ ಗಾಂಧಿ ವಸತಿ ನಿಗಮ ಮೂಲಕ ಮನೆ ಹಂಚುತ್ತೇವೆ. ನಾವು ಬುಲ್ಡೋಜರ್‌ ಪದ್ದತಿ ಬಳಸಿಲ್ಲ. ಈ ಕುರಿತು ನಮ್ಮ ಪಕ್ಷದ ನಾಯಕರಿಗೂ ಮಾಹಿತಿ ನೀಡಿದ್ದೇವೆ. ಅವರು ಇಲ್ಲಿನ ಸ್ಥಿತಿ ತಿಳಿದುಕೊಳ್ಳದೇ ಮಾತನಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.

ಸರ್ಕಾರಿ ಜಾಗ ಒತ್ತುವರಿಗೆ ನಾನು ಬಿಡಲ್ಲ. ಚುನಾವಣೆ ವೇಳೆ ಪಿಣರಾಯಿ ವಿಜಯನ್‌ ರಾಜಕೀಯ ಗಿಮಿಕ್‌ ಮಾಡುತ್ತಿದ್ದಾರೆ. ಸರ್ಕಾರಿ ಜಾಗದಲ್ಲಿ ಸ್ಲಮ್‌  ಮಾಡುವುದಕ್ಕೆ ಬಿಡಲ್ಲ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

3 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

3 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

3 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

3 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

3 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

3 hours ago