ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್ ಕಾಲೋನಿ ಹಾಗೂ ವಸೀಮ್ ಲೇಔಟ್ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಇದನ್ನು ಓದಿ: ಉತ್ತರ ಪ್ರದೇಶದಂತೆ ಬುಲ್ಡೋಜರ್ ಬಳಸಿ ಮುಸ್ಲಿಮರ ಮನೆ ಧ್ವಂಸ: ಕರ್ನಾಟಕದ ವಿರುದ್ಧ ಪಿಣರಾಯಿ ವಿಜಯನ್ ಆಕ್ರೋಶ
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇರಳ ಸಿಎಂ ವಾಸ್ತವ ಅರ್ಥ ಮಾಡಿಕೊಳ್ಳದೇ ಮಾತನಾಡಿದ್ದಾರೆ. ಕೆಲವರು ಟಂಪ್ ಸೈಟ್ನಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದರು. ಅಧಿಕಾರಿಗಳು ಅದನ್ನು ತೆರವು ಮಾಡಿದ್ದಾರೆ. ಮನೆ ಕಳೆದುಕೊಂಡವರಿಗೆ ನಾವು ಮನೆ ಹಂಚಿಕೆ ಮಾಡುತ್ತೇವೆ. ರಾಜೀವ್ ಗಾಂಧಿ ವಸತಿ ನಿಗಮ ಮೂಲಕ ಮನೆ ಹಂಚುತ್ತೇವೆ. ನಾವು ಬುಲ್ಡೋಜರ್ ಪದ್ದತಿ ಬಳಸಿಲ್ಲ. ಈ ಕುರಿತು ನಮ್ಮ ಪಕ್ಷದ ನಾಯಕರಿಗೂ ಮಾಹಿತಿ ನೀಡಿದ್ದೇವೆ. ಅವರು ಇಲ್ಲಿನ ಸ್ಥಿತಿ ತಿಳಿದುಕೊಳ್ಳದೇ ಮಾತನಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.
ಸರ್ಕಾರಿ ಜಾಗ ಒತ್ತುವರಿಗೆ ನಾನು ಬಿಡಲ್ಲ. ಚುನಾವಣೆ ವೇಳೆ ಪಿಣರಾಯಿ ವಿಜಯನ್ ರಾಜಕೀಯ ಗಿಮಿಕ್ ಮಾಡುತ್ತಿದ್ದಾರೆ. ಸರ್ಕಾರಿ ಜಾಗದಲ್ಲಿ ಸ್ಲಮ್ ಮಾಡುವುದಕ್ಕೆ ಬಿಡಲ್ಲ ಎಂದು ಹೇಳಿದರು.
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…