ರಾಜ್ಯ

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ ‘ಒಂದು ರಾಷ್ಟ್ರ ಒಂದು ಚುನಾವಣೆ’ ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಬಲವಾಗಿ ವಿರೋಧಿಸಿದ್ದಾರೆ.

ಇದೊಂದು ಅಧಿಕಾರ ಕೇಂದ್ರೀತ, ರಾಜಕೀಯ ಪ್ರೇರಿತ ಯೋಜನೆಯಾಗಿದ್ದು, ರಾಜ್ಯಗಳನ್ನು ದುರ್ಬಳಗೊಳಿಸುವುದರ ಮೂಲಕ ಒಕ್ಕೂಟ ವ್ಯವಸ್ಥೆಗೆ ತೀವ್ರ ಧಕ್ಕೆ ತರಲಿದೆ. ಇದೊಂದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವ ಅಪಾಯವಿದೆ. ಕೇಂದ್ರದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿರುವವರ ಅನುಕೂಲಕ್ಕೆ ತಕ್ಕಂತೆ ಹೆಣೆಯಲಾಗುತ್ತಿರುವ ಈ ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷನಾಗಿ ಹಾಗೂ ಕರ್ನಾಟಕ ಸರಕಾರದ ಉಪಮುಖ್ಯಮಂತ್ರಿ ಆಗಿ ಸರಸಗಟಾಗಿ ತಿರಸ್ಕರಿಸುತ್ತೇನೆ ಎಂದು ಸ್ಪಷ್ಟವಾಗಿ ಹೇಳಿದರು.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಜಂಟಿ ಸಂಸದೀಯ ಅಧ್ಯಯನ ಸಮಿತಿಯು ಶನಿವಾರ ಆಯೋಜಿಸಿದ್ದ ಒಂದು ರಾಷ್ಟ್ರ ಒಂದು ಚುನಾವಣೆ ಕುರಿತ ಸಂವಾದದಲ್ಲಿ ಅವರು ಅಭಿಪ್ರಾಯ ಮಂಡಿಸಿದರು.

‘ಒಂದು ದೇಶ ಒಂದು ಚುನಾವಣೆ’ ವಿರೋಧಿಸಿ ಕರ್ನಾಟಕ ವಿಧಾನಸಭೆಯು ಈಗಾಗಲೇ ನಿರ್ಣಯವನ್ನೂ ಅಂಗೀಕರಿಸಿದೆ ಎಂದೂ ಹೇಳಿದರು. ಆ ನಿರ್ಣಯವನ್ನೂ ಸಭೆಯಲ್ಲಿ ಓದಿದರು.

ಒಂದೊಮ್ಮೆ ರಾಜಕೀಯ ಅಸ್ಥಿರತೆ, ಅವಿಶ್ವಾಸ, ಬಹುಮತದ ಕೊರತೆಯಿಂದ ಒಂದು ಸರಕಾರ ಅರ್ಧಾವಧಿಯಲ್ಲೇ ಉರುಳಿ ಹೋದರೆ ಆಗ ಏನು ಮಾಡುವುದು? ಇದಕ್ಕೆ ಪರಿಹಾರ ಎಲ್ಲಿದೆ? ಒಂದೊಂದು ರಾಜ್ಯದಲ್ಲಿ ಒಂದೊಂದು ಅವಧಿಗೆ ಚುನಾವಣೆ ನಡೆಯುತ್ತದೆ. ಕರ್ನಾಟಕದಲ್ಲಿ ಮೂರು ವರ್ಷಗಳ ಹಿಂದೆ ಆಗಿತ್ತು. ತಮಿಳುನಾಡು, ಕೇರಳದಲ್ಲಿ ಮೊನ್ನೆಯಷ್ಟೇ ಆಗಿದೆ. ಪಂಜಾಬ್, ತೆಲಂಗಣದಲ್ಲಿ ಬೇರೆ ಕಾಲದಲ್ಲಿ ಆಗಿದೆ. ವಿವಿಧ ಕಾಲಾವಧಿಯ ಈ ಚುನಾವಣೆಗಳನ್ನು ಸಮಯಕರಿಸುವುದು ಹೇಗೆ? ಎಂದು ಪ್ರಶ್ನಿಸಿದರು.

ಇದು ಕಾರ್ಯಸಾಧು ಯೋಜನೆಯಲ್ಲ, ಪ್ರಾಕ್ಟಿಕಲಿ ಇಂಪಾಸಿಬಲ್ ಎಂದು ಖಚಿತವಾಗಿ ಹೇಳಿದರು.

ಇದು ಪ್ರಾದೇಶಿಕ ಪಕ್ಷಗಳು ಹಾಗೂ ಎದುರಾಳಿ ಪಕ್ಷಗಳ ಧ್ವನಿ ಅಡಗಿಸುವ ಹುನ್ನಾರವಾಗಿದೆ. ಈ ಪ್ರಸ್ತಾವನೆ ಬಗ್ಗೆ ಕರ್ನಾಟಕ ಸರಕಾರದ ಸಹಮತವಿಲ್ಲ. ನಮ್ಮ ಪಕ್ಷದ ರಾಷ್ಟ್ರೀಯ ಮುಖಂಡರ ಒಟ್ಟಾರೆ ನಿಲುವಿಗೆ ನಾವು ಬದ್ಧರಾಗಿದ್ದೇವೆ ಎಂದು ಅವರು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

31 mins ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

1 hour ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

1 hour ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

2 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

3 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

4 hours ago