ರಾಜ್ಯ

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ ‘ಒಂದು ರಾಷ್ಟ್ರ ಒಂದು ಚುನಾವಣೆ’ ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಬಲವಾಗಿ ವಿರೋಧಿಸಿದ್ದಾರೆ.

ಇದೊಂದು ಅಧಿಕಾರ ಕೇಂದ್ರೀತ, ರಾಜಕೀಯ ಪ್ರೇರಿತ ಯೋಜನೆಯಾಗಿದ್ದು, ರಾಜ್ಯಗಳನ್ನು ದುರ್ಬಳಗೊಳಿಸುವುದರ ಮೂಲಕ ಒಕ್ಕೂಟ ವ್ಯವಸ್ಥೆಗೆ ತೀವ್ರ ಧಕ್ಕೆ ತರಲಿದೆ. ಇದೊಂದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವ ಅಪಾಯವಿದೆ. ಕೇಂದ್ರದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿರುವವರ ಅನುಕೂಲಕ್ಕೆ ತಕ್ಕಂತೆ ಹೆಣೆಯಲಾಗುತ್ತಿರುವ ಈ ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷನಾಗಿ ಹಾಗೂ ಕರ್ನಾಟಕ ಸರಕಾರದ ಉಪಮುಖ್ಯಮಂತ್ರಿ ಆಗಿ ಸರಸಗಟಾಗಿ ತಿರಸ್ಕರಿಸುತ್ತೇನೆ ಎಂದು ಸ್ಪಷ್ಟವಾಗಿ ಹೇಳಿದರು.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಜಂಟಿ ಸಂಸದೀಯ ಅಧ್ಯಯನ ಸಮಿತಿಯು ಶನಿವಾರ ಆಯೋಜಿಸಿದ್ದ ಒಂದು ರಾಷ್ಟ್ರ ಒಂದು ಚುನಾವಣೆ ಕುರಿತ ಸಂವಾದದಲ್ಲಿ ಅವರು ಅಭಿಪ್ರಾಯ ಮಂಡಿಸಿದರು.

‘ಒಂದು ದೇಶ ಒಂದು ಚುನಾವಣೆ’ ವಿರೋಧಿಸಿ ಕರ್ನಾಟಕ ವಿಧಾನಸಭೆಯು ಈಗಾಗಲೇ ನಿರ್ಣಯವನ್ನೂ ಅಂಗೀಕರಿಸಿದೆ ಎಂದೂ ಹೇಳಿದರು. ಆ ನಿರ್ಣಯವನ್ನೂ ಸಭೆಯಲ್ಲಿ ಓದಿದರು.

ಒಂದೊಮ್ಮೆ ರಾಜಕೀಯ ಅಸ್ಥಿರತೆ, ಅವಿಶ್ವಾಸ, ಬಹುಮತದ ಕೊರತೆಯಿಂದ ಒಂದು ಸರಕಾರ ಅರ್ಧಾವಧಿಯಲ್ಲೇ ಉರುಳಿ ಹೋದರೆ ಆಗ ಏನು ಮಾಡುವುದು? ಇದಕ್ಕೆ ಪರಿಹಾರ ಎಲ್ಲಿದೆ? ಒಂದೊಂದು ರಾಜ್ಯದಲ್ಲಿ ಒಂದೊಂದು ಅವಧಿಗೆ ಚುನಾವಣೆ ನಡೆಯುತ್ತದೆ. ಕರ್ನಾಟಕದಲ್ಲಿ ಮೂರು ವರ್ಷಗಳ ಹಿಂದೆ ಆಗಿತ್ತು. ತಮಿಳುನಾಡು, ಕೇರಳದಲ್ಲಿ ಮೊನ್ನೆಯಷ್ಟೇ ಆಗಿದೆ. ಪಂಜಾಬ್, ತೆಲಂಗಣದಲ್ಲಿ ಬೇರೆ ಕಾಲದಲ್ಲಿ ಆಗಿದೆ. ವಿವಿಧ ಕಾಲಾವಧಿಯ ಈ ಚುನಾವಣೆಗಳನ್ನು ಸಮಯಕರಿಸುವುದು ಹೇಗೆ? ಎಂದು ಪ್ರಶ್ನಿಸಿದರು.

ಇದು ಕಾರ್ಯಸಾಧು ಯೋಜನೆಯಲ್ಲ, ಪ್ರಾಕ್ಟಿಕಲಿ ಇಂಪಾಸಿಬಲ್ ಎಂದು ಖಚಿತವಾಗಿ ಹೇಳಿದರು.

ಇದು ಪ್ರಾದೇಶಿಕ ಪಕ್ಷಗಳು ಹಾಗೂ ಎದುರಾಳಿ ಪಕ್ಷಗಳ ಧ್ವನಿ ಅಡಗಿಸುವ ಹುನ್ನಾರವಾಗಿದೆ. ಈ ಪ್ರಸ್ತಾವನೆ ಬಗ್ಗೆ ಕರ್ನಾಟಕ ಸರಕಾರದ ಸಹಮತವಿಲ್ಲ. ನಮ್ಮ ಪಕ್ಷದ ರಾಷ್ಟ್ರೀಯ ಮುಖಂಡರ ಒಟ್ಟಾರೆ ನಿಲುವಿಗೆ ನಾವು ಬದ್ಧರಾಗಿದ್ದೇವೆ ಎಂದು ಅವರು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

4 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

4 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

9 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

9 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

9 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

9 hours ago