ರಾಜ್ಯ

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ ‘ಒಂದು ರಾಷ್ಟ್ರ ಒಂದು ಚುನಾವಣೆ’ ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಬಲವಾಗಿ ವಿರೋಧಿಸಿದ್ದಾರೆ.

ಇದೊಂದು ಅಧಿಕಾರ ಕೇಂದ್ರೀತ, ರಾಜಕೀಯ ಪ್ರೇರಿತ ಯೋಜನೆಯಾಗಿದ್ದು, ರಾಜ್ಯಗಳನ್ನು ದುರ್ಬಳಗೊಳಿಸುವುದರ ಮೂಲಕ ಒಕ್ಕೂಟ ವ್ಯವಸ್ಥೆಗೆ ತೀವ್ರ ಧಕ್ಕೆ ತರಲಿದೆ. ಇದೊಂದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವ ಅಪಾಯವಿದೆ. ಕೇಂದ್ರದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿರುವವರ ಅನುಕೂಲಕ್ಕೆ ತಕ್ಕಂತೆ ಹೆಣೆಯಲಾಗುತ್ತಿರುವ ಈ ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷನಾಗಿ ಹಾಗೂ ಕರ್ನಾಟಕ ಸರಕಾರದ ಉಪಮುಖ್ಯಮಂತ್ರಿ ಆಗಿ ಸರಸಗಟಾಗಿ ತಿರಸ್ಕರಿಸುತ್ತೇನೆ ಎಂದು ಸ್ಪಷ್ಟವಾಗಿ ಹೇಳಿದರು.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಜಂಟಿ ಸಂಸದೀಯ ಅಧ್ಯಯನ ಸಮಿತಿಯು ಶನಿವಾರ ಆಯೋಜಿಸಿದ್ದ ಒಂದು ರಾಷ್ಟ್ರ ಒಂದು ಚುನಾವಣೆ ಕುರಿತ ಸಂವಾದದಲ್ಲಿ ಅವರು ಅಭಿಪ್ರಾಯ ಮಂಡಿಸಿದರು.

‘ಒಂದು ದೇಶ ಒಂದು ಚುನಾವಣೆ’ ವಿರೋಧಿಸಿ ಕರ್ನಾಟಕ ವಿಧಾನಸಭೆಯು ಈಗಾಗಲೇ ನಿರ್ಣಯವನ್ನೂ ಅಂಗೀಕರಿಸಿದೆ ಎಂದೂ ಹೇಳಿದರು. ಆ ನಿರ್ಣಯವನ್ನೂ ಸಭೆಯಲ್ಲಿ ಓದಿದರು.

ಒಂದೊಮ್ಮೆ ರಾಜಕೀಯ ಅಸ್ಥಿರತೆ, ಅವಿಶ್ವಾಸ, ಬಹುಮತದ ಕೊರತೆಯಿಂದ ಒಂದು ಸರಕಾರ ಅರ್ಧಾವಧಿಯಲ್ಲೇ ಉರುಳಿ ಹೋದರೆ ಆಗ ಏನು ಮಾಡುವುದು? ಇದಕ್ಕೆ ಪರಿಹಾರ ಎಲ್ಲಿದೆ? ಒಂದೊಂದು ರಾಜ್ಯದಲ್ಲಿ ಒಂದೊಂದು ಅವಧಿಗೆ ಚುನಾವಣೆ ನಡೆಯುತ್ತದೆ. ಕರ್ನಾಟಕದಲ್ಲಿ ಮೂರು ವರ್ಷಗಳ ಹಿಂದೆ ಆಗಿತ್ತು. ತಮಿಳುನಾಡು, ಕೇರಳದಲ್ಲಿ ಮೊನ್ನೆಯಷ್ಟೇ ಆಗಿದೆ. ಪಂಜಾಬ್, ತೆಲಂಗಣದಲ್ಲಿ ಬೇರೆ ಕಾಲದಲ್ಲಿ ಆಗಿದೆ. ವಿವಿಧ ಕಾಲಾವಧಿಯ ಈ ಚುನಾವಣೆಗಳನ್ನು ಸಮಯಕರಿಸುವುದು ಹೇಗೆ? ಎಂದು ಪ್ರಶ್ನಿಸಿದರು.

ಇದು ಕಾರ್ಯಸಾಧು ಯೋಜನೆಯಲ್ಲ, ಪ್ರಾಕ್ಟಿಕಲಿ ಇಂಪಾಸಿಬಲ್ ಎಂದು ಖಚಿತವಾಗಿ ಹೇಳಿದರು.

ಇದು ಪ್ರಾದೇಶಿಕ ಪಕ್ಷಗಳು ಹಾಗೂ ಎದುರಾಳಿ ಪಕ್ಷಗಳ ಧ್ವನಿ ಅಡಗಿಸುವ ಹುನ್ನಾರವಾಗಿದೆ. ಈ ಪ್ರಸ್ತಾವನೆ ಬಗ್ಗೆ ಕರ್ನಾಟಕ ಸರಕಾರದ ಸಹಮತವಿಲ್ಲ. ನಮ್ಮ ಪಕ್ಷದ ರಾಷ್ಟ್ರೀಯ ಮುಖಂಡರ ಒಟ್ಟಾರೆ ನಿಲುವಿಗೆ ನಾವು ಬದ್ಧರಾಗಿದ್ದೇವೆ ಎಂದು ಅವರು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಬೆಂಗಳೂರಿಗಿಂತ ಮಡಿಕೇರಿಯ ವಾಯುಗುಣಮಟ್ಟವೇ ಉತ್ತಮ!

ಮಡಿಕೇರಿ: ರಾಜ್ಯದಲ್ಲಿ ಮಳೆಯ ನಡುವೆಯೇ ವಾಯು ಗುಣಮಟ್ಟದಲ್ಲಿ ಬದಲಾವಣೆ ಕಂಡಿದ್ದು, ಬೆಂಗಳೂರಿನಲ್ಲಿ ಇಂದು 75 AQI ನೊಂದಿಗೆ ಸಾಧಾರಣ ಗಾಳಿ…

7 mins ago

ತಮಿಳುನಾಡು ಸಿಎಂ ವಿಜಯ್‌ ಸಾಧನೆ ಹೊಗಳಿದ ರಜಿನಿಕಾಂತ್‌

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಾಧನೆಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಮನಬಿಚ್ಚಿ ಹೊಗಳಿದ್ದಾರೆ. ‌ ಚನ್ನೈನ ತಮ್ಮ ನಿವಾಸದಲ್ಲಿ…

35 mins ago

ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಭಾರಿ ಬೆಂಕಿ ಅವಘಡ ; 68 ಪ್ರಯಾಣಿಕರ ಸ್ಥಳಾಂತರ

ಇಂದೋರ್‌ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ : ದಕ್ಷಿಣ ರಾಜ್ಯಗಳಲ್ಲಿ ನಡೆಯದ ಬಿಜೆಪಿ ಆಟ

ಬದಲಾವಣೆ ಎನ್ನುವುದು ಜಗದ ನಿಯಮ ಎನ್ನುವ ನಾಣ್ಣುಡಿ ಈಗ ರಾಜಕೀಯ ರಂಗದಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ, ತಮಿಳುನಾಡು…

4 hours ago

ಚಹಾದ ಸುತ್ತಮುತ್ತ ಹೀಗೊಂದು ಮಾತುಕತೆ

ಚಂದ್ರಶೇಖರ್‌ ಮೂರ್ತಿ.ಕೆ.ಎಸ್‌ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ…

4 hours ago

ಗುಲ್‌ಮೊಹರ್‌ ಮೋಹದಲ್ಲಿ ಮೋಹಕ ಮೈಸೂರು

ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್‌ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…

6 hours ago