ರಾಜ್ಯ

ಗಾಂಧಿ ಭಾರತ ಎಂದರೆ ಸ್ವಾಭಿಮಾನ, ಏಕತೆ, ಜಾತ್ಯಾತೀತ ಭಾರತ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ಗಾಂಧಿ ಭಾರತ ಎಂದರೆ ಸ್ವಾಭಿಮಾನ, ಏಕತೆ, ಸಾಮರಸ್ಯ, ಜಾತ್ಯಾತೀತ ಹಾಗೂ ಸರ್ವೋದಯ ಭಾರತವಾಗಿದೆ. “ನೀವು ಕ್ರಾಂತಿಕಾರಿಯನ್ನು ಕೊಲ್ಲಬಹುದು, ಆದರೆ ಕ್ರಾಂತಿಯನ್ನು ಕೊಲ್ಲಲು ಸಾಧ್ಯವಿಲ್ಲ” ಎಂದು ಮಹಾತ್ಮ ಗಾಂಧೀಜಿಯವರು ಹೇಳಿದ್ದಾರೆ. “ವ್ಯಕ್ತಿ ಸಾಯಬಹುದು, ಆದರೆ ತತ್ವಗಳು ಸಾಯಲು ಸಾಧ್ಯವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಇಂದು(ಜನವರಿ.21) ಕಾಂಗ್ರೆಸ್‌ ವತಿಯಿಂದ ಆಯೋಜಿಸಲಾಗಿದ್ದ ಜೈ ಬಾಪು, ಜೈ ಭೀಮ್‌, ಜೈ ಸಂವಿಧಾನ ಸಮಾವೇಶದಲ್ಲಿ ಮಾತನಾಡಿದ ಅವರು, ವಿಶ್ವಕ್ಕೆ ಶಾಂತಿ ಸಹಬಾಳ್ವೆಯ ಸಂದೇಶ ಕೊಟ್ಟಿದ್ದು ನಮ್ಮ ಮಹಾತ್ಮ ಗಾಂಧೀಜಿಯವರು. 1924ರಲ್ಲಿ ಬೆಳಗಾವಿಯಲ್ಲಿ ನಡೆದ ಅಧಿವೇಶನದ ಮೂಲಕ ಸ್ವಾತಂತ್ರ್ಯ ಹೋರಾಟಕ್ಕೆ ಸಂಕ್ರಾಂತಿಯ ಹುರುಪು ತಂದುಕೊಟ್ಟಿದ್ದನ್ನು ನಾವು ಯಾರೂ ಇಂದಿಗೂ ಮರೆಯಲು ಸಾಧ್ಯವಿಲ್ಲ. ಗಾಂಧೀಜಿಯವರು ಸ್ವಾತಂತ್ರ್ಯ ತಂದುಕೊಟ್ಟರೇ, ಡಾ.ಬಿ.ಆರ್‌.ಅಂಬೇಡ್ಕರ್ ಅವರು ಸಂವಿಧಾನವನ್ನು ಕೊಟ್ಟರು ಎಂದು ಹೇಳಿದರು.

ಸಂವಿಧಾನವೇ ನಮ್ಮ ತಂದೆ-ತಾಯಿ, ಸಂವಿಧಾನವೇ ನಮ್ಮ ಬಂಧು ಬಳಗ, ಸಂವಿಧಾನವೇ ನಮ್ಮ ಗ್ರಂಥ, ಜೈ ಭೀಮ್ ಮೂಲಕ ನಮ್ಮ ನಡುವೆ ಜೀವಂತವಾಗಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನವನ್ನು ಇಂದು ನಾವೆಲ್ಲರೂ ಉಳಿಸಿಕೊಂಡು ಹೋಗಬೇಕು. ಆದರೆ ಇದೀಗ ಸುಳ್ಳಿನ ವಿರುದ್ಧ ಹೋರಾಟ ಮಾಡಿದ ಮಹಾತ್ಮನ ವಿರುದ್ಧವೇ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಎಂದು ಕಿಡಿಕಾರಿದರು.

ದುಷ್ಟರಿಂದ ಗಾಂಧೀಜಿಯವರ ಚಿಂತನೆ ಉಳಿಯಬೇಕಾಗಿದೆ. ಗೋಡ್ಸೆ ಚಿಂತನೆಯನ್ನು ನಾವೆಲ್ಲ ಸೇರಿ ನಾಶ ಮಾಡಬೇಕಿದೆ. ಗಾಂಧೀಜಿಯವರ ತತ್ವಗಳನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ತಲುಪಿಸಬೇಕಿದೆ. ಹೀಗಾಗಿ ʼಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶʼವನ್ನು ಈ ವರ್ಷ ಪೂರ್ತಿ ದೇಶದ ಪ್ರತಿ ತಾಲ್ಲೂಕುಗಳಲ್ಲೂ ನಡೆಸಬೇಕು’ ಎಂದು ಎಐಸಿಸಿ ಅಧ್ಯಕ್ಷರಲ್ಲಿ ನಾನು ಮನವಿ ಮಾಡುತ್ತೇನೆ. ಅಲ್ಲದೇ ವರ್ಷಪೂರ್ತಿ ಈ ಕಾರ್ಯಕ್ರಮ ನಡೆಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದರು.

ಇನ್ನೂ 924ರ ಅಧಿವೇಶನ ಕರ್ನಾಟಕದ ಏಕೀಕರಣಕ್ಕೂ ಶಕ್ತಿ ತುಂಬಿತ್ತು. ಕರ್ನಾಟಕವನ್ನು ಕಟ್ಟಿತ್ತಲ್ಲದೇ ಕನ್ನಡಿಗರನ್ನು ಒಂದುಗೂಡಿಸಿತ್ತು. ಆದರೆ ಇದೀಗ ನಮಗೆ ಆರ್ಥಿಕ ಸ್ವಾತಂತ್ರ್ಯ ಬೇಕು. ಅದನ್ನು ಗ್ಯಾರಂಟಿಗಳ ಮೂಲಕ ಕಾಂಗ್ರೆಸ್ ನೀಡಿದೆ. ಆ ಮೂಲಕ ನುಡಿದಂತೆ ನಡೆದಿದ್ದೇವೆ. ನಾವೆಲ್ಲರೂ ಸೇರಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಎಂಬ ಈ ಮೂರು ತತ್ವಗಳನ್ನು ಉಳಿಸೋಣ ಹಾಗೂ ಭಾರತದ ಪ್ರಜಾಪ್ರಭುತ್ವವನ್ನು ಕಾಪಾಡೋಣ ಎಂದರು.

ಅರ್ಚನ ಎಸ್‌ ಎಸ್

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

6 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

9 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

9 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

11 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

12 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

13 hours ago