ರಾಜ್ಯ

ಗಾಂಧಿ ಭಾರತ ಎಂದರೆ ಸ್ವಾಭಿಮಾನ, ಏಕತೆ, ಜಾತ್ಯಾತೀತ ಭಾರತ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ಗಾಂಧಿ ಭಾರತ ಎಂದರೆ ಸ್ವಾಭಿಮಾನ, ಏಕತೆ, ಸಾಮರಸ್ಯ, ಜಾತ್ಯಾತೀತ ಹಾಗೂ ಸರ್ವೋದಯ ಭಾರತವಾಗಿದೆ. “ನೀವು ಕ್ರಾಂತಿಕಾರಿಯನ್ನು ಕೊಲ್ಲಬಹುದು, ಆದರೆ ಕ್ರಾಂತಿಯನ್ನು ಕೊಲ್ಲಲು ಸಾಧ್ಯವಿಲ್ಲ” ಎಂದು ಮಹಾತ್ಮ ಗಾಂಧೀಜಿಯವರು ಹೇಳಿದ್ದಾರೆ. “ವ್ಯಕ್ತಿ ಸಾಯಬಹುದು, ಆದರೆ ತತ್ವಗಳು ಸಾಯಲು ಸಾಧ್ಯವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಇಂದು(ಜನವರಿ.21) ಕಾಂಗ್ರೆಸ್‌ ವತಿಯಿಂದ ಆಯೋಜಿಸಲಾಗಿದ್ದ ಜೈ ಬಾಪು, ಜೈ ಭೀಮ್‌, ಜೈ ಸಂವಿಧಾನ ಸಮಾವೇಶದಲ್ಲಿ ಮಾತನಾಡಿದ ಅವರು, ವಿಶ್ವಕ್ಕೆ ಶಾಂತಿ ಸಹಬಾಳ್ವೆಯ ಸಂದೇಶ ಕೊಟ್ಟಿದ್ದು ನಮ್ಮ ಮಹಾತ್ಮ ಗಾಂಧೀಜಿಯವರು. 1924ರಲ್ಲಿ ಬೆಳಗಾವಿಯಲ್ಲಿ ನಡೆದ ಅಧಿವೇಶನದ ಮೂಲಕ ಸ್ವಾತಂತ್ರ್ಯ ಹೋರಾಟಕ್ಕೆ ಸಂಕ್ರಾಂತಿಯ ಹುರುಪು ತಂದುಕೊಟ್ಟಿದ್ದನ್ನು ನಾವು ಯಾರೂ ಇಂದಿಗೂ ಮರೆಯಲು ಸಾಧ್ಯವಿಲ್ಲ. ಗಾಂಧೀಜಿಯವರು ಸ್ವಾತಂತ್ರ್ಯ ತಂದುಕೊಟ್ಟರೇ, ಡಾ.ಬಿ.ಆರ್‌.ಅಂಬೇಡ್ಕರ್ ಅವರು ಸಂವಿಧಾನವನ್ನು ಕೊಟ್ಟರು ಎಂದು ಹೇಳಿದರು.

ಸಂವಿಧಾನವೇ ನಮ್ಮ ತಂದೆ-ತಾಯಿ, ಸಂವಿಧಾನವೇ ನಮ್ಮ ಬಂಧು ಬಳಗ, ಸಂವಿಧಾನವೇ ನಮ್ಮ ಗ್ರಂಥ, ಜೈ ಭೀಮ್ ಮೂಲಕ ನಮ್ಮ ನಡುವೆ ಜೀವಂತವಾಗಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನವನ್ನು ಇಂದು ನಾವೆಲ್ಲರೂ ಉಳಿಸಿಕೊಂಡು ಹೋಗಬೇಕು. ಆದರೆ ಇದೀಗ ಸುಳ್ಳಿನ ವಿರುದ್ಧ ಹೋರಾಟ ಮಾಡಿದ ಮಹಾತ್ಮನ ವಿರುದ್ಧವೇ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಎಂದು ಕಿಡಿಕಾರಿದರು.

ದುಷ್ಟರಿಂದ ಗಾಂಧೀಜಿಯವರ ಚಿಂತನೆ ಉಳಿಯಬೇಕಾಗಿದೆ. ಗೋಡ್ಸೆ ಚಿಂತನೆಯನ್ನು ನಾವೆಲ್ಲ ಸೇರಿ ನಾಶ ಮಾಡಬೇಕಿದೆ. ಗಾಂಧೀಜಿಯವರ ತತ್ವಗಳನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ತಲುಪಿಸಬೇಕಿದೆ. ಹೀಗಾಗಿ ʼಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶʼವನ್ನು ಈ ವರ್ಷ ಪೂರ್ತಿ ದೇಶದ ಪ್ರತಿ ತಾಲ್ಲೂಕುಗಳಲ್ಲೂ ನಡೆಸಬೇಕು’ ಎಂದು ಎಐಸಿಸಿ ಅಧ್ಯಕ್ಷರಲ್ಲಿ ನಾನು ಮನವಿ ಮಾಡುತ್ತೇನೆ. ಅಲ್ಲದೇ ವರ್ಷಪೂರ್ತಿ ಈ ಕಾರ್ಯಕ್ರಮ ನಡೆಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದರು.

ಇನ್ನೂ 924ರ ಅಧಿವೇಶನ ಕರ್ನಾಟಕದ ಏಕೀಕರಣಕ್ಕೂ ಶಕ್ತಿ ತುಂಬಿತ್ತು. ಕರ್ನಾಟಕವನ್ನು ಕಟ್ಟಿತ್ತಲ್ಲದೇ ಕನ್ನಡಿಗರನ್ನು ಒಂದುಗೂಡಿಸಿತ್ತು. ಆದರೆ ಇದೀಗ ನಮಗೆ ಆರ್ಥಿಕ ಸ್ವಾತಂತ್ರ್ಯ ಬೇಕು. ಅದನ್ನು ಗ್ಯಾರಂಟಿಗಳ ಮೂಲಕ ಕಾಂಗ್ರೆಸ್ ನೀಡಿದೆ. ಆ ಮೂಲಕ ನುಡಿದಂತೆ ನಡೆದಿದ್ದೇವೆ. ನಾವೆಲ್ಲರೂ ಸೇರಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಎಂಬ ಈ ಮೂರು ತತ್ವಗಳನ್ನು ಉಳಿಸೋಣ ಹಾಗೂ ಭಾರತದ ಪ್ರಜಾಪ್ರಭುತ್ವವನ್ನು ಕಾಪಾಡೋಣ ಎಂದರು.

ಅರ್ಚನ ಎಸ್‌ ಎಸ್

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

2 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

2 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

2 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

12 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

14 hours ago