ರಾಜ್ಯ

ಪಕ್ಷದ ಚೌಕಟ್ಟಿನಲ್ಲಿ ಶಿಸ್ತಿನಿಂದ ಕೆಲಸ ಮಾಡುವವರಿಗೆ ತಲೆಬಾಗಿ ಸೇವೆ ಮಾಡುವೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ನಮ್ಮ ಪಕ್ಷದಲ್ಲಿ ನಾನು ಯಾರೊಂದಿಗೂ ಭಿನ್ನಾಭಿಪ್ರಾಯವನ್ನಿಟ್ಟುಕೊಂಡಿಲ್ಲ. ಪಕ್ಷದ ಚೌಕಟ್ಟಿನಲ್ಲಿ ಶಿಸ್ತಿನಿಂದ ಯಾವುದೇ ಸಚಿವರು ಅಥವಾ ಶಾಸಕರು ಕೆಲಸ ಮಾಡಿದರೂ, ಅವರಿಗೆ ನಾನು ತಲೆಬಾಗಿ ಸೇವೆ ಮಾಡುತ್ತೇನೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಇಂದು(ಜನವರಿ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಲ್‌ ಡರ್ಟಿ ಪಾಲಿಟಿಕ್ಸ್‌ ವಿಚಾರವಾಗಿ ಕೇಳುವುದಾದರೆ ನನ್ನೊಂದಿಗೆ ಮಾತನಾಡಬೇಡಿ. ನಮ್ಮ ಪಕ್ಷ ನನಗೆ ಮುಖ್ಯವಾಗಿದೆ. ನಮ್ಮಲ್ಲಿ ಯಾವುದೇ ಬಂಡಾಯವಿಲ್ಲ. ಹೀಗಾಗಿ ರಾಜ್ಯದಲ್ಲಿ ಏನೇ ನಡೆದರೂ, ಅನಗತ್ಯವಾಗಿ ನನ್ನ ಹೆಸರನ್ನು ಎಳೆದು ತರಬೇಡಿ ಎಂದು ಹೇಳಿದರು.

ಇನ್ನೂ ಕೆಪಿಸಿಸಿ ಅಧ್ಯಕ್ಷನಾಗಿ ಪಕ್ಷವನ್ನು ಸಂಘಟಿಸುವುದು, ಸರ್ಕಾರವನ್ನು ಭದ್ರವಾಗಿಡುವುದು ಹಾಗೂ ಕಾರ್ಯಕರ್ತರನ್ನು ರಕ್ಷಿಸುವುದಷ್ಟೇ ನನ್ನ ಕೆಲಸವಾಗಿದೆ. ಪಕ್ಷಕ್ಕಾಗಿ ನಾನು ಎಂದಿಗೂ ತ್ಯಾಗ ಮಾಡುತ್ತ ಬಂದಿದ್ದೇನೆ. ಅಲ್ಲದೇ ಈ ಹಿಂದೆ ಧರ್ಮಸಿಂಗ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿದ್ದ ದಿನದಿಂದ ಇಲ್ಲಿಯವರೆಗೂ ನಾನು ಪಕ್ಷಕ್ಕಾಗಿ ತ್ಯಾಗ ಮಾಡುತ್ತ ಬಂದಿರುವೆ. ನಮ್ಮ ಪಕ್ಷವಷ್ಟೇ ನನಗೆ ಮುಖ್ಯ, ಅದರಿಂದ ಸಾರ್ವಜನಿಕರಿಗೆ ಒಳ್ಳೆಯದಾದರೆ ಸಾಕು ಎಂದರು.

ಅರ್ಚನ ಎಸ್‌ ಎಸ್

Recent Posts

ಮೈಸೂರು | ನೂತನ ಬಸ್‌ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಸಚಿವ ಮಹದೇವಪ್ಪ

ಮೈಸೂರು : ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಹೆಚ್.ಸಿ ಮಹದೇವಪ್ಪ ಅವರು ಇಂದು(ಮಾರ್ಚ್‌.28) 120 ಕೋಟಿ ರೂ…

8 mins ago

ಮೈಸೂರು | ವರ್ತುಲ ರಸ್ತೆ ಇಕ್ಕೆಲಗಳ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಮೈಸೂರು : ನಗರದ ಹೊರ ವರ್ತುಲ ರಸ್ತೆಯಲ್ಲಿ ಹಗಲು ವೇಳೆ ಸಾಕಷ್ಟು ವಾಹನಗಳು ಹಾಗೂ ಸಾರ್ವಜನಿಕರು ಓಡಾಡಲು ಸ್ವಚ್ಛತೆ ಕೊರತೆ…

20 mins ago

ನನಗೆ ಐಪಿಎಲ್‌ ಟಿಕೆಟ್‌ ಬೇಡ ಎಂದ ಸುರೇಶ್‌ ಕುಮಾರ್‌

ಬೆಂಗಳೂರು: ಐಪಿಎಲ್‌ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್‌ ಅಥವಾ ಪಾಸ್‌ಗಳನ್ನು ವಿತರಿಸಬಾರದೆಂದು ಬಿಜೆಪಿ ಶಾಸಕ ಸುರೇಶ್‌ ಕುಮಾರ್‌…

25 mins ago

ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ, ಮಾಜಿ ಗೃಹ ಸಚಿವ ಅರೆಸ್ಟ್‌

ಕಠ್ಮಂಡು: ಕಳೆದ ವರ್ಷ ದೇಶದಾದ್ಯಂತ ನಡೆದಿದ್ದ ಜನರೇಷನ್‌ ಝಡ್‌ ಪ್ರತಿಭಟನೆಗೆ ಸಂಬಂಧಿಸಿದಂತೆ ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಹಾಗೂ…

42 mins ago

ವೈರಮುಡಿ ಬ್ರಹ್ಮೋತ್ಸವಕ್ಕೆ ಕ್ಷಣಗಣನೆ : ವೈರಮುಡಿ ಆಭರಣ ತಲೆಮೇಲೆ ಹೊತ್ತು ತಂದ ಡಿಸಿ, ಎಸ್‌ಪಿ

ಮೇಲುಕೋಟೆ : ವಿಶ್ವವಿಖ್ಯಾತ ಮೇಲುಕೋಟೆ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಕಿರೀಟಧಾರಣಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕೆ ಪೂರ್ವಭಾವಿಯಾಗಿ, ಜಿಲ್ಲಾ ಖಜಾನೆಯಿಂದ…

59 mins ago

ಪತಿ ಮೃತಪಟ್ಟ ಮಾರನೇ ದಿನವೇ ಕರ್ತವ್ಯಕ್ಕೆ ಹಾಜರಾದ ಶಿಕ್ಷಕಿ!

ಎಚ್‌.ಡಿ.ಕೋಟೆ : ಪತಿ ಮೃತಪಟ್ಟ ಮಾರನೇ ದಿನವೇ ಶಿಕ್ಷಕಿಯೊಬ್ಬರು ಶಾಲೆಗೆ ಹಾಜರಾಗಿ ಕರ್ತವ್ಯ ನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹಂಪಾಪುರ ಸಮೀಪದ…

2 hours ago