ರಾಜ್ಯ

ಪಕ್ಷದ ಚೌಕಟ್ಟಿನಲ್ಲಿ ಶಿಸ್ತಿನಿಂದ ಕೆಲಸ ಮಾಡುವವರಿಗೆ ತಲೆಬಾಗಿ ಸೇವೆ ಮಾಡುವೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ನಮ್ಮ ಪಕ್ಷದಲ್ಲಿ ನಾನು ಯಾರೊಂದಿಗೂ ಭಿನ್ನಾಭಿಪ್ರಾಯವನ್ನಿಟ್ಟುಕೊಂಡಿಲ್ಲ. ಪಕ್ಷದ ಚೌಕಟ್ಟಿನಲ್ಲಿ ಶಿಸ್ತಿನಿಂದ ಯಾವುದೇ ಸಚಿವರು ಅಥವಾ ಶಾಸಕರು ಕೆಲಸ ಮಾಡಿದರೂ, ಅವರಿಗೆ ನಾನು ತಲೆಬಾಗಿ ಸೇವೆ ಮಾಡುತ್ತೇನೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಇಂದು(ಜನವರಿ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಲ್‌ ಡರ್ಟಿ ಪಾಲಿಟಿಕ್ಸ್‌ ವಿಚಾರವಾಗಿ ಕೇಳುವುದಾದರೆ ನನ್ನೊಂದಿಗೆ ಮಾತನಾಡಬೇಡಿ. ನಮ್ಮ ಪಕ್ಷ ನನಗೆ ಮುಖ್ಯವಾಗಿದೆ. ನಮ್ಮಲ್ಲಿ ಯಾವುದೇ ಬಂಡಾಯವಿಲ್ಲ. ಹೀಗಾಗಿ ರಾಜ್ಯದಲ್ಲಿ ಏನೇ ನಡೆದರೂ, ಅನಗತ್ಯವಾಗಿ ನನ್ನ ಹೆಸರನ್ನು ಎಳೆದು ತರಬೇಡಿ ಎಂದು ಹೇಳಿದರು.

ಇನ್ನೂ ಕೆಪಿಸಿಸಿ ಅಧ್ಯಕ್ಷನಾಗಿ ಪಕ್ಷವನ್ನು ಸಂಘಟಿಸುವುದು, ಸರ್ಕಾರವನ್ನು ಭದ್ರವಾಗಿಡುವುದು ಹಾಗೂ ಕಾರ್ಯಕರ್ತರನ್ನು ರಕ್ಷಿಸುವುದಷ್ಟೇ ನನ್ನ ಕೆಲಸವಾಗಿದೆ. ಪಕ್ಷಕ್ಕಾಗಿ ನಾನು ಎಂದಿಗೂ ತ್ಯಾಗ ಮಾಡುತ್ತ ಬಂದಿದ್ದೇನೆ. ಅಲ್ಲದೇ ಈ ಹಿಂದೆ ಧರ್ಮಸಿಂಗ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿದ್ದ ದಿನದಿಂದ ಇಲ್ಲಿಯವರೆಗೂ ನಾನು ಪಕ್ಷಕ್ಕಾಗಿ ತ್ಯಾಗ ಮಾಡುತ್ತ ಬಂದಿರುವೆ. ನಮ್ಮ ಪಕ್ಷವಷ್ಟೇ ನನಗೆ ಮುಖ್ಯ, ಅದರಿಂದ ಸಾರ್ವಜನಿಕರಿಗೆ ಒಳ್ಳೆಯದಾದರೆ ಸಾಕು ಎಂದರು.

ಅರ್ಚನ ಎಸ್‌ ಎಸ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

13 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

13 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

13 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

16 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

16 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

16 hours ago