ಬೆಳಗಾವಿ: ನಮ್ಮ ಪಕ್ಷದಲ್ಲಿ ನಾನು ಯಾರೊಂದಿಗೂ ಭಿನ್ನಾಭಿಪ್ರಾಯವನ್ನಿಟ್ಟುಕೊಂಡಿಲ್ಲ. ಪಕ್ಷದ ಚೌಕಟ್ಟಿನಲ್ಲಿ ಶಿಸ್ತಿನಿಂದ ಯಾವುದೇ ಸಚಿವರು ಅಥವಾ ಶಾಸಕರು ಕೆಲಸ ಮಾಡಿದರೂ, ಅವರಿಗೆ ನಾನು ತಲೆಬಾಗಿ ಸೇವೆ ಮಾಡುತ್ತೇನೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಇಂದು(ಜನವರಿ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಲ್ ಡರ್ಟಿ ಪಾಲಿಟಿಕ್ಸ್ ವಿಚಾರವಾಗಿ ಕೇಳುವುದಾದರೆ ನನ್ನೊಂದಿಗೆ ಮಾತನಾಡಬೇಡಿ. ನಮ್ಮ ಪಕ್ಷ ನನಗೆ ಮುಖ್ಯವಾಗಿದೆ. ನಮ್ಮಲ್ಲಿ ಯಾವುದೇ ಬಂಡಾಯವಿಲ್ಲ. ಹೀಗಾಗಿ ರಾಜ್ಯದಲ್ಲಿ ಏನೇ ನಡೆದರೂ, ಅನಗತ್ಯವಾಗಿ ನನ್ನ ಹೆಸರನ್ನು ಎಳೆದು ತರಬೇಡಿ ಎಂದು ಹೇಳಿದರು.
ಇನ್ನೂ ಕೆಪಿಸಿಸಿ ಅಧ್ಯಕ್ಷನಾಗಿ ಪಕ್ಷವನ್ನು ಸಂಘಟಿಸುವುದು, ಸರ್ಕಾರವನ್ನು ಭದ್ರವಾಗಿಡುವುದು ಹಾಗೂ ಕಾರ್ಯಕರ್ತರನ್ನು ರಕ್ಷಿಸುವುದಷ್ಟೇ ನನ್ನ ಕೆಲಸವಾಗಿದೆ. ಪಕ್ಷಕ್ಕಾಗಿ ನಾನು ಎಂದಿಗೂ ತ್ಯಾಗ ಮಾಡುತ್ತ ಬಂದಿದ್ದೇನೆ. ಅಲ್ಲದೇ ಈ ಹಿಂದೆ ಧರ್ಮಸಿಂಗ್ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ದಿನದಿಂದ ಇಲ್ಲಿಯವರೆಗೂ ನಾನು ಪಕ್ಷಕ್ಕಾಗಿ ತ್ಯಾಗ ಮಾಡುತ್ತ ಬಂದಿರುವೆ. ನಮ್ಮ ಪಕ್ಷವಷ್ಟೇ ನನಗೆ ಮುಖ್ಯ, ಅದರಿಂದ ಸಾರ್ವಜನಿಕರಿಗೆ ಒಳ್ಳೆಯದಾದರೆ ಸಾಕು ಎಂದರು.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…