ಬೆಂಗಳೂರು: ಕೇಂದ್ರ ಸರ್ಕಾರ ಬಜೆಟ್ನಿಂದ ನಮ್ಮ ರಾಜ್ಯಕ್ಕೆ ನೀಡಿರುವ ಕೊಗುಗೆಗಳ ಬಗ್ಗೆ ಪಟ್ಟಿ ನೀಡಲಿ ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.3) ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು ನೀಡಿರುವ ಹೇಳಿಕೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಸರ್ಕಾರದ ಆರ್ಥಿಕ ಪರಿಸ್ಥಿತಿ ವಿಚಾರ ಪಕ್ಕಕ್ಕಿರಲಿ, ಕೇಂದ್ರ ಸರ್ಕಾರದ ಬಜೆಟ್ನಲ್ಲಿ ಕರ್ನಾಟಕಕ್ಕೆ ಕೇಂದ್ರದಿಂದ ಯಾವ ಕೊಡುಗೆ ನೀಡಿದ್ದಾರೆ ಎಂದು ಮೊದಲು ಪಟ್ಟಿ ಕೊಡಲಿ. ನಾಲಿಗೆಯಿಂದ ಯಾವುದಾದರೂ ಮಾತು ಬಂದರೆ ಅದನ್ನು ಉಳಿಸಿಕೊಂಡು, ಅದರಂತೆ ನಡೆದುಕೊಳ್ಳಬೇಕು. ಕೇಂದ್ರದ ಬಜೆಟ್ ನೋಡಿದರೆ ನನಗೆ ನಾಚಿಕೆಯಾಗುತ್ತದೆ. ಅವರು ಮೊದಲು ತಮ್ಮ ಮಾತನ್ನು ಉಳಿಸಿಕೊಳ್ಳಲಿ ಎಂದು ವಾಗ್ದಾಳಿ ನಡೆಸಿದರು.
ಕೇಂದ್ರ ಸರ್ಕಾರ ಎಷ್ಟು ಸಾಲ ಮಾಡಿದೆ ಎಂಬುದನ್ನು ನಾವು ಅರಿಯಬೇಕು. ನಮ್ಮ ರಾಜ್ಯ ಸರ್ಕಾರ ಅಷ್ಟು ದೊಡ್ಡ ಪ್ರಮಾಣದ ಸಾಲವನ್ನು ಮಾಡಿಲ್ಲ. ಅಲ್ಲದೇ ನಾವು ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದಾಗ ಕೂಡ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ರಾಜ್ಯ ದಿವಾಳಿಯಾಗಿದೆ ಎಂದು ಆರೋಪಿಸಿದ್ದರು. ಬಳಿಕ ಎಲ್ಲಾ ರಾಜ್ಯಗಳ ಚುನಾವಣೆಯಲ್ಲಿ ಅವರು ಗ್ಯಾರಂಟಿ ಯೋಜನೆ ನಕಲು ಮಾಡಿ ಘೋಷಿಸಿದ್ದಾರೆ. ಇನ್ನೂ ರಾಜ್ಯ ಸರ್ಕಾರ ಬೆಲೆ ಏರಿಕೆ ಮತ್ತು ನಿರುದ್ಯೋಗ ಸಮಸ್ಯೆಯಿಂದ ಬಳಲಿದ್ದ ಸಾರ್ವಜನಿಕರಿಗೆ ನೆರವಾಗಲು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದೆಯೆ ಹೊರತು, ಮತಕ್ಕಾಗಿ ಅಲ್ಲ ಎಂದು ಕಿಡಿಕಾರಿದರು.
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…