ಕಾಸರಗೋಡು: ಬಿಜೆಪಿಯ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಅವರಿಗೆ ಮತ್ತೆ ರಾಜಕೀಯವಾಗಿ ಸ್ಥಾನಮಾನ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕೇರಳ ರಾಜ್ಯದ ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಿನ್ನೆಲೆ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಅಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ನಳಿನ್ ಕುಮಾರ್ ಕಟೀಲ್ ಹಾಗೂ ಡಿಕೆ ಶಿವಕುಮಾರ್ ಒಂದೇ ವೇದಿಕೆಯನ್ನು ಹಂಚಿಕೊಂಡಿದ್ದರು. ಈ ವೇಳೆ ನಳಿನ್ ಕುಮಾರ್ ಪರ ಪ್ರಾರ್ಥನೆ ಮಾಡಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?
ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಮಿತ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾಜಿ ಅಂದುಕೊಳ್ಳೋದು ಬೇಡ, ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ. ಹೀರೋ ಝೀರೋ ಆಗುತ್ತಾರೆ, ಝೀರೋ ಆಗಿರರುವರು ಹೀರೋ ಆಗುತ್ತಾರೆ. ರಾಜಕಾರಣದಲ್ಲಿ ಯಾವುದು ಶಾಶ್ವತವಲ್ಲ ಎಂದು ಹೇಳಿದರು.
ನಾನು ಹಾಗೂ ನಳೀನ್ ಅವರು ಒಂದೇ ವೇದಿಕೆಯಲ್ಲಿ ದೇವರನ್ನು ಪ್ರಾರ್ಥಿಸಿದ್ದೇವೆ. ಭಗವಂತ ನಿಮ್ಮ ಎಲ್ಲಾ ವಿಘ್ನ ನಿವಾರಣೆ ಮಾಡಿ ಮತ್ತೆ ಈ ರಾಜ್ಯದಲ್ಲಿ ಜನಪ್ರತಿನಿಧಿಯಾಗಿ ಸೇವೆ ಮಾಡುವ ಅವಕಾಶ ಕೊಡಲಿ. ಇನ್ನೊಮ್ಮೆ ರಾಜಕೀಯದಲ್ಲಿ ನಿಮಗೆ ಅವಕಾಶ ಸಿಗಲಿಯೆಂದು ನಾನೂ ಸಹ ಪ್ರಾರ್ಥನೆ ಮಾಡುತ್ತೇನೆ ಎಂದರು.
ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಕೋಳಿ ಫಾರಂ ಶೆಡ್ಗೆ ಬೆಂಕಿ ತಗುಲಿ ಸುಮಾರು 4…
ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…
ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…
ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…
ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್ಐಆರ್…
ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…