ಕಾಸರಗೋಡು: ಬಿಜೆಪಿಯ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಅವರಿಗೆ ಮತ್ತೆ ರಾಜಕೀಯವಾಗಿ ಸ್ಥಾನಮಾನ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕೇರಳ ರಾಜ್ಯದ ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಿನ್ನೆಲೆ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಅಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ನಳಿನ್ ಕುಮಾರ್ ಕಟೀಲ್ ಹಾಗೂ ಡಿಕೆ ಶಿವಕುಮಾರ್ ಒಂದೇ ವೇದಿಕೆಯನ್ನು ಹಂಚಿಕೊಂಡಿದ್ದರು. ಈ ವೇಳೆ ನಳಿನ್ ಕುಮಾರ್ ಪರ ಪ್ರಾರ್ಥನೆ ಮಾಡಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?
ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಮಿತ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾಜಿ ಅಂದುಕೊಳ್ಳೋದು ಬೇಡ, ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ. ಹೀರೋ ಝೀರೋ ಆಗುತ್ತಾರೆ, ಝೀರೋ ಆಗಿರರುವರು ಹೀರೋ ಆಗುತ್ತಾರೆ. ರಾಜಕಾರಣದಲ್ಲಿ ಯಾವುದು ಶಾಶ್ವತವಲ್ಲ ಎಂದು ಹೇಳಿದರು.
ನಾನು ಹಾಗೂ ನಳೀನ್ ಅವರು ಒಂದೇ ವೇದಿಕೆಯಲ್ಲಿ ದೇವರನ್ನು ಪ್ರಾರ್ಥಿಸಿದ್ದೇವೆ. ಭಗವಂತ ನಿಮ್ಮ ಎಲ್ಲಾ ವಿಘ್ನ ನಿವಾರಣೆ ಮಾಡಿ ಮತ್ತೆ ಈ ರಾಜ್ಯದಲ್ಲಿ ಜನಪ್ರತಿನಿಧಿಯಾಗಿ ಸೇವೆ ಮಾಡುವ ಅವಕಾಶ ಕೊಡಲಿ. ಇನ್ನೊಮ್ಮೆ ರಾಜಕೀಯದಲ್ಲಿ ನಿಮಗೆ ಅವಕಾಶ ಸಿಗಲಿಯೆಂದು ನಾನೂ ಸಹ ಪ್ರಾರ್ಥನೆ ಮಾಡುತ್ತೇನೆ ಎಂದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…