ಬೆಂಗಳೂರು: ನಮ್ಮ ಸರ್ಕಾರದ ಈ ಬಾರಿಯ ಬಜೆಟ್ ದೇಶಕ್ಕೆ ಮಾದರಿ. ದೇಶದ ಬೇರೆ ರಾಜ್ಯಗಳು ನಮ್ಮ ಬಜೆಟ್ ಅನ್ನು ಗಮನಿಸುತ್ತಿದ್ದು, ನಮ್ಮ ರಾಜ್ಯದ ಬಜೆಟ್ ಉತ್ತಮವಾಗಿದೆ. ಹಾಗಾಗಿ ಕರ್ನಾಟಕದ ಜನತೆಗೆ ಅನುಕೂಲ ಆಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಾರಿ ಬಜೆಟ್ನಲ್ಲಿ ಸಿಎಂ ಸಿದ್ದಾಮಯ್ಯ ಅವರು ಟನಲ್ ರಸ್ತೆ ನಿರ್ಮಾಣಕ್ಕೆ 40 ಕೋಟಿ ರೂ.ಬಿಡುಗಡೆ ಮಾಡಿದ್ದಾರೆ. ಹೊಸ ಮೆಟ್ರೋ ಏನೇ ಮಾಡಿದರೂ ಅದರ ಜೊತೆಗೆ ಎಲಿವೇಟೇಡ್ ಕಾರಿಡಾರ್ ಸಹ ನಾವು ಮಾಡುತ್ತೇವೆ. ಶೇ.50% ಕಾರ್ಪೋರೇಷನ್, 50% ಬಿಎಂಆರ್ಸಿಎಲ್ ನೀಡುತ್ತದೆ. ಹೀಗಾಗಿ ನಾವು ಕಾರಿಡಾರ್ ಮಾಡುತ್ತೇವೆ ಎಂದರು.
ನಾವು ಹೇಳಿದಂತೆ 300 ಕಿ.ಮೀ. ರಸ್ತೆ ನಿರ್ಮಾಣ ಮಾಡುತ್ತೇವೆ. ಕಾಲುವೆ ಪಕ್ಕದಲ್ಲಿ 50 ಅಡಿ ಬಿಟ್ಟು ರಸ್ತೆ ನಿರ್ಮಾಣ ಮಾಡುತ್ತೇವೆ. ಅದರ ಬದಲಾಗಿ ಅವರಿಗೆ ಟಿಡಿಆರ್ ನೀಡಿ ಅಲ್ಲಿ ರೋಡ್ ಮಾಡುತ್ತೇವೆ. ಹೀಗಾಗಿ 3000 ಕೋಟಿ ರೂ. ವೆಚ್ಚದಲ್ಲಿ 300 ಕಿ.ಮೀ. ರಸ್ತೆ ನಿರ್ಮಾಣ ಆಗಲಿದೆ ಎಂದು ಹೇಳಿದರು.
ಬಿಜೆಪಿ ಅವರು ಏನು ಬೇಕಾದರೂ ಮಾತನಾಡಲಿ
ಇದೇ ಸಂದರ್ಭದಲ್ಲಿ ಬಿಜೆಪಿ ಹಲಾಲ್ ಬಜೆಟ್ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯವರು ಏನು ಬೇಕಾದರೂ ಮಾತಾಡಲಿ. ಪಾಪ ಅವರು ಇನ್ನೇನು ಹೇಳೋಕೆ ಸಾಧ್ಯ? ಸತ್ಯನಾ ಮುಚ್ಚಿಡೋಕೆ ಆಗುತ್ತಾ? ಬಿಜೆಪಿಯವರು ಬಜೆಟ್ನ ಕಣ್ಣಲ್ಲಿ ಓದಿದ್ದಾರೆ, ಕಿವಿಯಲ್ಲಿ ಕೇಳಿಸಿಕೊಡಿದ್ದಾರೆ. ಹೀಗಿರುವಾಗ ಅವರು ಇನ್ನೇನು ಮಾಡುತ್ತಾರೆ, ಹೀಗೇ ಮಾತನಾಡುವುದನ್ನು ಬಿಟ್ಟರೆ, ಬಾಯಿಂದ ಸುಳ್ಳು ಹೇಳಬಹುದು. ಹಾಗಾಗಿ ಅದನ್ನು ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಬೆಂಗಳೂರು ವಿವಿಗೆ ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಹೆಸರಿಡುವ ವಿಚಾರ
ಇನ್ನು ಬೆಂಗಳೂರು ವಿವಿಗೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಹೆಸರಿಡುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮನಮೋಹನ್ ಸಿಂಗ್ ಹೆಸರನ್ನು ಯಾಕೆ ಇಡಬಾರದು? ಅವರು ಯಾವ್ಯಾವುದೋ ಹೆಸರು ಇಡುತ್ತಾರೆ. ದೇಶದಲ್ಲಿ ಇಂಟರ್ನ್ಯಾಷನಲ್ ಏರ್ಪೋರ್ಟ್ಗೆ ಫ್ಲೈ ಓವರ್ ಮಾಡಿದ್ದು ಯಾರು? ಬೆಂಗಳೂರಿನ ನೆಲಮಂಗಲದಲ್ಲಿ ಫ್ಲೈಓವರ್ ಮಾಡಿದ್ದು ಯಾರು? ಎಲೆಕ್ಟ್ರಾನಿಕ್ ಸಿಟಿಗೆ ಫ್ಲೈಓವರ್ ಮಾಡಿದ್ದು ಯಾರು? ನರೇಗಾವನ್ನು ಜಾರಿಗೆ ತಂದಿದ್ದು ಯಾರು? ಬಿಜೆಪಿಯವರು ಏನಾದರೂ ಮಾಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…
ಮೈಸೂರು : ವನ್ಯಜೀವಿ ಕಳ್ಳಸಾಗಣೆ ವಿರುದ್ಧ ಕಾರ್ಯಾಚರಣೆ ನಡೆಸಿರುವ ಮಹಾರಾಷ್ಟ್ರ ರಾಜ್ಯದ ನಾಗ್ಪುರ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು(ಡಿಆರ್ಐ) ಮೈಸೂರಿನಲ್ಲಿ ಶಂಕಿತ…
ಹೊಸದಿಲ್ಲಿ : ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ವಿರುದ್ಧ ಎದ್ದಿದ್ದ ರಾಜಕೀಯ…