ರಾಜ್ಯ

ರಾಜ್ಯ ಬಜೆಟ್‌ ದೇಶಕ್ಕೆ ಮಾದರಿ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಮ್ಮ ಸರ್ಕಾರದ ಈ ಬಾರಿಯ ಬಜೆಟ್‌ ದೇಶಕ್ಕೆ ಮಾದರಿ. ದೇಶದ ಬೇರೆ ರಾಜ್ಯಗಳು ನಮ್ಮ ಬಜೆಟ್‌ ಅನ್ನು ಗಮನಿಸುತ್ತಿದ್ದು, ನಮ್ಮ ರಾಜ್ಯದ ಬಜೆಟ್‌ ಉತ್ತಮವಾಗಿದೆ. ಹಾಗಾಗಿ ಕರ್ನಾಟಕದ ಜನತೆಗೆ ಅನುಕೂಲ ಆಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಮಾರ್ಚ್.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಾರಿ ಬಜೆಟ್‌ನಲ್ಲಿ ಸಿಎಂ ಸಿದ್ದಾಮಯ್ಯ ಅವರು ಟನಲ್‌ ರಸ್ತೆ ನಿರ್ಮಾಣಕ್ಕೆ 40 ಕೋಟಿ ರೂ.ಬಿಡುಗಡೆ ಮಾಡಿದ್ದಾರೆ. ಹೊಸ ಮೆಟ್ರೋ ಏನೇ ಮಾಡಿದರೂ ಅದರ ಜೊತೆಗೆ ಎಲಿವೇಟೇಡ್ ಕಾರಿಡಾರ್ ಸಹ ನಾವು ಮಾಡುತ್ತೇವೆ. ಶೇ.50% ಕಾರ್ಪೋರೇಷನ್, 50% ಬಿಎಂಆರ್‌ಸಿಎಲ್ ನೀಡುತ್ತದೆ. ಹೀಗಾಗಿ ನಾವು ಕಾರಿಡಾರ್‌ ಮಾಡುತ್ತೇವೆ ಎಂದರು.

ನಾವು ಹೇಳಿದಂತೆ 300 ಕಿ.ಮೀ. ರಸ್ತೆ ನಿರ್ಮಾಣ ಮಾಡುತ್ತೇವೆ. ಕಾಲುವೆ ಪಕ್ಕದಲ್ಲಿ 50 ಅಡಿ ಬಿಟ್ಟು ರಸ್ತೆ ನಿರ್ಮಾಣ ಮಾಡುತ್ತೇವೆ. ಅದರ ಬದಲಾಗಿ ಅವರಿಗೆ ಟಿಡಿಆರ್ ನೀಡಿ ಅಲ್ಲಿ ರೋಡ್ ಮಾಡುತ್ತೇವೆ. ಹೀಗಾಗಿ 3000 ಕೋಟಿ ರೂ. ವೆಚ್ಚದಲ್ಲಿ 300 ಕಿ.ಮೀ. ರಸ್ತೆ ನಿರ್ಮಾಣ ಆಗಲಿದೆ ಎಂದು ಹೇಳಿದರು.

ಬಿಜೆಪಿ ಅವರು ಏನು ಬೇಕಾದರೂ ಮಾತನಾಡಲಿ

ಇದೇ ಸಂದರ್ಭದಲ್ಲಿ ಬಿಜೆಪಿ ಹಲಾಲ್‌ ಬಜೆಟ್‌ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯವರು ಏನು ಬೇಕಾದರೂ ಮಾತಾಡಲಿ. ಪಾಪ ಅವರು ಇನ್ನೇನು ಹೇಳೋಕೆ ಸಾಧ್ಯ? ಸತ್ಯನಾ ಮುಚ್ಚಿಡೋಕೆ ಆಗುತ್ತಾ? ಬಿಜೆಪಿಯವರು ಬಜೆಟ್‌ನ ಕಣ್ಣಲ್ಲಿ ಓದಿದ್ದಾರೆ, ಕಿವಿಯಲ್ಲಿ ಕೇಳಿಸಿಕೊಡಿದ್ದಾರೆ. ಹೀಗಿರುವಾಗ ಅವರು ಇನ್ನೇನು ಮಾಡುತ್ತಾರೆ, ಹೀಗೇ ಮಾತನಾಡುವುದನ್ನು ಬಿಟ್ಟರೆ, ಬಾಯಿಂದ ಸುಳ್ಳು ಹೇಳಬಹುದು. ಹಾಗಾಗಿ ಅದನ್ನು ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಬೆಂಗಳೂರು ವಿವಿಗೆ ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್‌ ಹೆಸರಿಡುವ ವಿಚಾರ

ಇನ್ನು ಬೆಂಗಳೂರು ವಿವಿಗೆ ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಹೆಸರಿಡುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮನಮೋಹನ್ ಸಿಂಗ್ ಹೆಸರನ್ನು ಯಾಕೆ ಇಡಬಾರದು? ಅವರು ಯಾವ್ಯಾವುದೋ ಹೆಸರು ಇಡುತ್ತಾರೆ. ದೇಶದಲ್ಲಿ ಇಂಟರ್‌ನ್ಯಾಷನಲ್‌ ಏರ್‌ಪೋರ್ಟ್‌ಗೆ ಫ್ಲೈ ಓವರ್‌ ಮಾಡಿದ್ದು ಯಾರು? ಬೆಂಗಳೂರಿನ ನೆಲಮಂಗಲದಲ್ಲಿ ಫ್ಲೈಓವರ್‌ ಮಾಡಿದ್ದು ಯಾರು? ಎಲೆಕ್ಟ್ರಾನಿಕ್‌ ಸಿಟಿಗೆ ಫ್ಲೈಓವರ್‌ ಮಾಡಿದ್ದು ಯಾರು? ನರೇಗಾವನ್ನು ಜಾರಿಗೆ ತಂದಿದ್ದು ಯಾರು? ಬಿಜೆಪಿಯವರು ಏನಾದರೂ ಮಾಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

7 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

7 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

9 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

9 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

9 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

17 hours ago