ರಾಜ್ಯ

ಸಿನಿಮಾ ಇಲ್ಲದೇ ಬದುಕುವ ಶಕ್ತಿ ನಮಗೆ ಇದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಸಿನಿಮಾ ಇಲ್ಲದೇ ಬದುಕುವ ಶಕ್ತಿ ನಮಗೆ ಇದೆ. ಆದರೆ ಅವರಿಗೆ ಫಿಲಂ ಪ್ರಮೋಷನ್‌ಗೆ ಜನರೂ ಬೇಕು, ಸರ್ಕಾರವೂ ಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಮಾರ್ಚ್‌.4) ನಟ್ಟು, ಬೋಲ್ಟ್‌ ಟೈಟು ಮಾಡುವ ಹೇಳಿಕೆಗೆ ಚಿತ್ರರಂಗ ಟೀಕೆ ಮಾಡುತ್ತಿರುವ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿನಿಮಾದವರು ಟೀಕೆ ಮಾಡಲಿ ಎಂದು ಹೇಳುತ್ತಿದ್ದೇನೆ. ಅವರಿಗೆಲ್ಲಾ ಎಷ್ಟು ಸಹಾಯ ಮಾಡಿದ್ದೇನೆ ಎಂದು ನನಗೂ ಗೊತ್ತಿದೆ, ಅದು ಸಹಾಯ ಮಾಡಿಸಿಕೊಂಡವರಿಗೂ ಗೊತ್ತಿದೆ ಎಂದು ಹೇಳಿದರು.

ಕರ್ನಾಟಕ ರಾಜ್ಯದ ಹಣ, ನೆಲ, ಜಲ ಹಾಗೂ ಭಾಷೆ ಸಿನಿಮಾದವರಿಗೂ ಅನ್ವಯಿಸುತ್ತದೆ. ಆದರೆ ಇದೀಗ ಅಂತಾರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ ಮಾಡಿದ್ದು, ಕನ್ನಡ ಚಿತ್ರರಂಗ ಬೆಳೆಯಲಿಯೆಂದು ಅಷ್ಟೇ. ಸಿನಿಮಾ ಕಲಾವಿದ ರು ಅವರ ಚಿತ್ರಗಳಿಗೆ ಅವರ ಪ್ರಚಾರ ಮಾಡದೇ, ನಾವು ಬೆಳಿಗ್ಗೆ-ಸಂಜೆ ಮಾಡೋಕೆ ಆಗುತ್ತದೆಯೇ ಎಂದು ಪ್ರಶ್ನಿಸಿದರು.

ಹಿರಿಯ ನಿರ್ದೇಶಕ ಟಿ.ಎಸ್‌.ನಾಗಾಭರಣ ಅವರನ್ನು ಆಹ್ವಾನ ಮಾಡದೇ ಇರುವ ಬಗ್ಗೆ ಮಾತನಾಡಿದ ಅವರು, ನಾಗಾಭೃಣ ಅವರಿಗೆ ಆಮಂತ್ರಣ ನೀಡದೆ ಇರಬಹುದು. ಇದರಲ್ಲಿ ಇಲಾಖೆಯ ತಪ್ಪಿದೆಯೋ ಅಥವಾ ಇಲ್ಲವೋ ಗೊತ್ತಿಲ್ಲ. ಕಾರ್ಯಕ್ರಮ ಅವರದ್ದು, ನನಗೆ ಗೊತ್ತು ಅವರು ಟೀಕಿಸಿತ್ತಾರೆಂದು ಆದರೆ ಅವರು ಟೀಕಿಸಿದರೂ ಸರಿಯೇ ನನಗೇನೂ ಬೇಜಾರಿಲ್ಲ. ನಾವು ತಪ್ಪು ಮಾಡಿದ್ದರೆ ನಾವೇ ಸರಿ ಮಾಡಿಕೊಳ್ಳುತ್ತೇವೆ. ಅವರ ಕಡೆಯಿಂದ ತಪ್ಪಾಗಿದ್ದರೆ ಅವರು ಸರಿ ಮಾಡಿಕೊಳ್ಳಲಿ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

17 mins ago

ಬೈಲಕುಪ್ಪೆ ಹಿಟ್‌ ಅಂಡ್‌ ರನ್‌ ಕೇಸ್‌ ; ರಸ್ತೆ ತಡೆದು ಪ್ರತಿಭಟನೆ ನಡೆಸಿದ ಸ್ಥಳೀಯರು

ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…

49 mins ago

ಬಹುಭಾಷಾ ನಟ ಪ್ರಕಾಶ್‌ ರಾಜ್‌ ತಾಯಿ ಸುವರ್ಣಲತಾ ನಿಧನ

ಹೈದರಬಾದ್‌ : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು…

60 mins ago

ಧುರಂಧರ್-‌2 ನಟಿ ಸಾರಾ ಅರ್ಜುನ್‌ಗೆ ಫ್ಯಾನ್ಸ್‌ ಮುತ್ತಿಗೆ ; ಮಗಳಿಗೆ ಬಾಡಿ ಗಾರ್ಡ್‌ ಆದ ತಂದೆ

ಮುಂಬೈ : ‘ಧುರಂಧರ್-2’ ಚಿತ್ರದ ಯಶಸ್ವಿ ನಟಿ ಸಾರಾ ಅರ್ಜುನ್ ಅವರಿಗೆ ಸದ್ಯ ಖ್ಯಾತಿ ಹೆಚ್ಚಾಗಿದೆ. ಭಾನುವಾರ ಮುಂಬೈನ ವಾಂಖೆಡೆ…

1 hour ago

ತಮಿಳುನಾಡು ಚುನಾವಣೆ | ಸಿಎಂ ಸ್ಟಾಲಿನ್‌, ನಟ ವಿಜಯ್‌ ನಾಮತ್ರ ಸಲ್ಲಿಕೆ

ಚೆನ್ನೈ : ಏಪ್ರಿಲ್‌ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಮತ್ತು ಪ್ರತಿಸ್ಪರ್ಧಿ ಟಿವಿಕೆ…

2 hours ago

ಮಡಿಕೇರಿ | ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದ ಬಸ್‌ ; ತಪ್ಪಿದ ಭಾರೀ ಅನಾಹುತ

ಮಡಿಕೇರಿ : ಸರ್ಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್…

3 hours ago