ನವದೆಹಲಿ: ಒತ್ತುವರಿ ಮಾಡಿಲ್ಲ ಎಂದಾದರೆ ಕುಮಾರಸ್ವಾಮಿ ಏಕೆ ಗಾಬರಿಯಾಗಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.
ಈ ಕುರಿತು ನವದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲದಕ್ಕೂ ಅಳತೆ ಹಾಗೂ ದಾಖಲೆ ಇರುತ್ತದೆ. ಜಮೀನನ್ನು ಒತ್ತುವರಿ ಮಾಡಿಕೊಂಡಿಲ್ಲ ಎಂದಾದರೆ ಕುಮಾರಸ್ವಾಮಿ ಭಯಪಡುವುದು ಬೇಡ ಎಂದರು.
ಕುಮಾರಸ್ವಾಮಿ ಅವರ ವಿರುದ್ಧ ನಾನು ಹಾಗೂ ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡಿಲ್ಲ. ಅದರ ಅವಶ್ಯಕತೆಯೂ ನಮಗೆ ಇಲ್ಲ. ನ್ಯಾಯಾಲಯ ಹೇಳಿದಂತೆ ಕಾನೂನು ಪ್ರಕಾರ ಕೆಲಸ ಮಾಡಲಾಗಿದೆ. ಕೇತಗಾನಹಳ್ಳಿ ಸುದ್ದಿಗೆ ನಾವು ಹೋಗಿಲ್ಲ. ನಮಗೆ ಈ ವಿಚಾರ ಗೊತ್ತಿಲ್ಲ. ಇದು ಬಹಳ ವರ್ಷದಿಂದ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಾನು ಕೂಡ ವಾಟ್ಸಾಪ್ನಲ್ಲಿ ಈ ಸುದ್ದಿಯನ್ನು ನೋಡಿದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಒಳಮೀಸಲಾತಿ ವಿಚಾರವಾಗಿ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿಗೆ ನಾವು ಬದ್ಧವಾಗಿದ್ದೇವೆ. ಬೋವಿಗಳು, ಲಂಬಾಣಿ, ಕೊರಮ, ಕೊರಚ, ಎಡಗೈ, ಬಲಗೈಗೆ ಸೇರಿದ ಸಮುದಾಯಗಳಿವೆ. ಅವರೆಲ್ಲಾ ಸೇರಿ ಒಂದು ತೀರ್ಮಾನಕ್ಕೆ ಬಂದರೆ ಸಂತೋಷ ಎಂದರು.
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್ಬೋಟ್ಗಳಿಂದ…
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು…
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…