ನವದೆಹಲಿ: ಒತ್ತುವರಿ ಮಾಡಿಲ್ಲ ಎಂದಾದರೆ ಕುಮಾರಸ್ವಾಮಿ ಏಕೆ ಗಾಬರಿಯಾಗಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.
ಈ ಕುರಿತು ನವದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲದಕ್ಕೂ ಅಳತೆ ಹಾಗೂ ದಾಖಲೆ ಇರುತ್ತದೆ. ಜಮೀನನ್ನು ಒತ್ತುವರಿ ಮಾಡಿಕೊಂಡಿಲ್ಲ ಎಂದಾದರೆ ಕುಮಾರಸ್ವಾಮಿ ಭಯಪಡುವುದು ಬೇಡ ಎಂದರು.
ಕುಮಾರಸ್ವಾಮಿ ಅವರ ವಿರುದ್ಧ ನಾನು ಹಾಗೂ ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡಿಲ್ಲ. ಅದರ ಅವಶ್ಯಕತೆಯೂ ನಮಗೆ ಇಲ್ಲ. ನ್ಯಾಯಾಲಯ ಹೇಳಿದಂತೆ ಕಾನೂನು ಪ್ರಕಾರ ಕೆಲಸ ಮಾಡಲಾಗಿದೆ. ಕೇತಗಾನಹಳ್ಳಿ ಸುದ್ದಿಗೆ ನಾವು ಹೋಗಿಲ್ಲ. ನಮಗೆ ಈ ವಿಚಾರ ಗೊತ್ತಿಲ್ಲ. ಇದು ಬಹಳ ವರ್ಷದಿಂದ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಾನು ಕೂಡ ವಾಟ್ಸಾಪ್ನಲ್ಲಿ ಈ ಸುದ್ದಿಯನ್ನು ನೋಡಿದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಒಳಮೀಸಲಾತಿ ವಿಚಾರವಾಗಿ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿಗೆ ನಾವು ಬದ್ಧವಾಗಿದ್ದೇವೆ. ಬೋವಿಗಳು, ಲಂಬಾಣಿ, ಕೊರಮ, ಕೊರಚ, ಎಡಗೈ, ಬಲಗೈಗೆ ಸೇರಿದ ಸಮುದಾಯಗಳಿವೆ. ಅವರೆಲ್ಲಾ ಸೇರಿ ಒಂದು ತೀರ್ಮಾನಕ್ಕೆ ಬಂದರೆ ಸಂತೋಷ ಎಂದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…