ಬೆಂಗಳೂರು: ಮಾಧ್ಯಮದ ಮೂಲಕ ಪಕ್ಷದ ಹುದ್ದೆ ಕೇಳ್ತಾರಾ ಎಂದು ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಬಗ್ಗೆ ನಿನ್ನೆ ಸಚಿವ ಸತೀಶ್ ಜಾರಕಿಹೊಳಿ ಅವರು, ಹೈಕಮಾಂಡ್ಗೆ ಆಗ್ರಹಿಸಿದ್ದರು.
ಪೂರ್ಣ ಅವಧಿಗೆ ಕೆಪಿಸಿಸಿ ಅಧ್ಯಕ್ಷರನ್ನು ಆಯ್ಕೆ ಮಾಡಬೇಕು. ಇಲ್ಲದೇ ಬೇರೆಯವರನ್ನು ಆ ಸ್ಥಾನಕ್ಕೆ ಕೂರಿಸಿ ಎಂದು ಹೈಕಮಾಂಡ್ಗೆ ಒತ್ತಾಯಿಸಿದ್ದರು.
ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದು ಸಚಿವ ಜಾರಕಿಹೊಳಿ ಹೇಳಿಕೆ ಸಂಬಂಧ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಮಾಧ್ಯಮದ ಮೂಲಕ ಪಕ್ಷದಲ್ಲಿ ಹುದ್ದೇ ಕೇಳುತ್ತಾರಾ? ಸ್ಥಾನ ಸಿಗಬೇಕು ಎಂದರೆ ಮೀಡಿಯಾದಲ್ಲಿ ಕೊಡ್ತಾರಾ ಎಂದು ಮೀಡಿಯಾದಲ್ಲಿ ಅಂಗಡಿಯಲ್ಲಿ ಎಲ್ಲೂ ಸ್ಥಾನ ಸಿಗಲ್ಲ. ನಮ್ಮ ಕೆಲಸ ಗುರುತಿಸಿ ಹುದ್ದೆ ಕೊಡುತ್ತಾರೆ. ಕೆಲಸ ಮಾಡುವ ಆಧಾರದ ಮೇಲೆ ಸ್ಥಾನ ನಿರ್ಧಾರವಾಗುತ್ತದೆ ಎಂದು ಟಾಂಗ್ ಕೊಟ್ಟರು.
ಇನ್ನು ಮುಂದುವರಿದು ಮಾತನಾಡಿದ ಅವರು, ಅಂಗಡಿಯಲ್ಲೋ, ಮಾಧ್ಯಮದಲ್ಲೋ ಸ್ಥಾನ ಸಿಗುತ್ತಾ? ಮೀಡಿಯಾ ಮೂಲಕ ಯಾರಾದರೂ ಪಾರ್ಟಿಯ ಹುದ್ದೆ ಕೇಳ್ತಾರಾ? ಇದನ್ನೆಲ್ಲಾ ನಾನು ಹೊಸದಾಗಿ ನೋಡುತ್ತಿದ್ದೇನೆ ಎಂದು ಸತೀಶ್ ಜಾರಕಿಹೊಳಿ ವಿರುದ್ಧ ಕಿಡಿಕಾರಿದರು.
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…
11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…
ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…
ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ…