ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯಲಿದೆ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಡಿ.ಕೆ. ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯಲಿದೆ ಎಂಬ ಬೊಮ್ಮಾಯಿ ಹೇಳಿಕೆ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಚಾರವಾಗಿ ಮಾತನಾಡಲು ಪ್ರತ್ಯೇಕವಾಗಿ ಮತ್ತೊಂದು ಮಾಧ್ಯಮಗೋಷ್ಠಿ ನಡೆಸಿ ಉತ್ತರ ನೀಡುತ್ತೇನೆ. ಯಾರೆಲ್ಲಾ ಏನೇನು ಹೇಳಿದ್ದಾರೆ ಎಂದು ನೀವು ಪಟ್ಟಿ ಮಾಡಿಕೊಂಡಿರಿ, ಎಲ್ಲರಿಗೂ ಉತ್ತರ ನೀಡುತ್ತೇನೆ. ಅವರಿಗೆ ಹೊಸ ವರ್ಷದ ಸಂದರ್ಭದಲ್ಲಿ ಒಳ್ಳೆಯದಾಗಲಿ ಎಂದು ಶುಭಕೋರುತ್ತೇನೆ. ಅವರಿಗೆ ಸೂಜಿ ದಾರ ಕಳುಹಿಸಿಕೊಡುತ್ತೇನೆ. ಮೊದಲು ಅವರು ತಮ್ಮ ಒಡೆದ ಮನೆಯನ್ನು ಒಲಿದುಕೊಳ್ಳಲಿ ಎಂದು ತಿರುಗೇಟು ನೀಡಿದರು.
ಇನ್ನು ಸರ್ಕಾರದ ಹಣ ವ್ಯರ್ಥ ಮಾಡುತ್ತಿದ್ದಾರೆ ಎಂಬ ಬಿಜೆಪಿ ಹಾಗೂ ಜೆಡಿಎಸ್ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ನವರು ಬರೀ ಆರೋಪ ಮಾಡುತ್ತಿರಲಿ. ನಾವು ನಮ್ಮ ಸಿದ್ಧಾಂತ, ಆಚಾರ ವಿಚಾರವನ್ನು ಸರ್ಕಾರದ ಮೂಲಕ ಹೇಳುತ್ತೇವೆ. ಬಸವಣ್ಣ, ಕೆಂಪೇಗೌಡ, ಅಂಬೇಡ್ಕರ್, ಗಾಂಧೀಜಿ ಅವರ ಪ್ರತಿಮೆ ಮಾಡುತ್ತೇವೆ. ಈ ದೇಶದಲ್ಲಿ ಅತಿ ಹೆಚ್ಚು ಪ್ರತಿಮೆಗಳಿರುವುದು ಅಂಬೇಡ್ಕರ್ ಅವರದ್ದು, ಕೆಲವರು ಇದನ್ನು ಮರೆತಿದ್ದಾರೆ. ಮರೆತಿದ್ದನ್ನು ನೆನಪಿಸಬೇಕಲ್ಲವೇ. ವಿಧಾನಸೌಧದ ಮುಂದೆ ಇರುವ ಅಂಬೇಡ್ಕರ್ ಅವರ ಹಾಗೂ ಗಾಂಧೀಜಿ, ನೆಹರೂ ಅವರ ಪ್ರತಿಮೆ ಸರ್ಕಾರದ್ದಲ್ಲವೇ? ಮುಂದಿನ ದಿನಗಳಲ್ಲಿ ಮನಮೋಹನ್ ಸಿಂಗ್ ಅವರು ಕೊಟ್ಟ ಕಾರ್ಯಕ್ರಮಗಳ ಬಗ್ಗೆಯೂ ಪ್ರಚಾರ ಮಾಡಲು ನಾವು ರೂಪುರೇಷೆ ಸಿದ್ಧಪಡಿಸುತ್ತಿದ್ದೇವೆ ಎಂದು ತಿಳಿಸಿದರು.
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…