ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯಲಿದೆ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಡಿ.ಕೆ. ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯಲಿದೆ ಎಂಬ ಬೊಮ್ಮಾಯಿ ಹೇಳಿಕೆ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಚಾರವಾಗಿ ಮಾತನಾಡಲು ಪ್ರತ್ಯೇಕವಾಗಿ ಮತ್ತೊಂದು ಮಾಧ್ಯಮಗೋಷ್ಠಿ ನಡೆಸಿ ಉತ್ತರ ನೀಡುತ್ತೇನೆ. ಯಾರೆಲ್ಲಾ ಏನೇನು ಹೇಳಿದ್ದಾರೆ ಎಂದು ನೀವು ಪಟ್ಟಿ ಮಾಡಿಕೊಂಡಿರಿ, ಎಲ್ಲರಿಗೂ ಉತ್ತರ ನೀಡುತ್ತೇನೆ. ಅವರಿಗೆ ಹೊಸ ವರ್ಷದ ಸಂದರ್ಭದಲ್ಲಿ ಒಳ್ಳೆಯದಾಗಲಿ ಎಂದು ಶುಭಕೋರುತ್ತೇನೆ. ಅವರಿಗೆ ಸೂಜಿ ದಾರ ಕಳುಹಿಸಿಕೊಡುತ್ತೇನೆ. ಮೊದಲು ಅವರು ತಮ್ಮ ಒಡೆದ ಮನೆಯನ್ನು ಒಲಿದುಕೊಳ್ಳಲಿ ಎಂದು ತಿರುಗೇಟು ನೀಡಿದರು.
ಇನ್ನು ಸರ್ಕಾರದ ಹಣ ವ್ಯರ್ಥ ಮಾಡುತ್ತಿದ್ದಾರೆ ಎಂಬ ಬಿಜೆಪಿ ಹಾಗೂ ಜೆಡಿಎಸ್ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ನವರು ಬರೀ ಆರೋಪ ಮಾಡುತ್ತಿರಲಿ. ನಾವು ನಮ್ಮ ಸಿದ್ಧಾಂತ, ಆಚಾರ ವಿಚಾರವನ್ನು ಸರ್ಕಾರದ ಮೂಲಕ ಹೇಳುತ್ತೇವೆ. ಬಸವಣ್ಣ, ಕೆಂಪೇಗೌಡ, ಅಂಬೇಡ್ಕರ್, ಗಾಂಧೀಜಿ ಅವರ ಪ್ರತಿಮೆ ಮಾಡುತ್ತೇವೆ. ಈ ದೇಶದಲ್ಲಿ ಅತಿ ಹೆಚ್ಚು ಪ್ರತಿಮೆಗಳಿರುವುದು ಅಂಬೇಡ್ಕರ್ ಅವರದ್ದು, ಕೆಲವರು ಇದನ್ನು ಮರೆತಿದ್ದಾರೆ. ಮರೆತಿದ್ದನ್ನು ನೆನಪಿಸಬೇಕಲ್ಲವೇ. ವಿಧಾನಸೌಧದ ಮುಂದೆ ಇರುವ ಅಂಬೇಡ್ಕರ್ ಅವರ ಹಾಗೂ ಗಾಂಧೀಜಿ, ನೆಹರೂ ಅವರ ಪ್ರತಿಮೆ ಸರ್ಕಾರದ್ದಲ್ಲವೇ? ಮುಂದಿನ ದಿನಗಳಲ್ಲಿ ಮನಮೋಹನ್ ಸಿಂಗ್ ಅವರು ಕೊಟ್ಟ ಕಾರ್ಯಕ್ರಮಗಳ ಬಗ್ಗೆಯೂ ಪ್ರಚಾರ ಮಾಡಲು ನಾವು ರೂಪುರೇಷೆ ಸಿದ್ಧಪಡಿಸುತ್ತಿದ್ದೇವೆ ಎಂದು ತಿಳಿಸಿದರು.
ವಾಷಿಂಗ್ಟನ್: ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…
ರಾಮನಗರ: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ. ನಿಮ್ಮ ಮನೆ ಮಗ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.…
ಶ್ರೀನಗರ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಮಯದಲ್ಲಿ ಕಡಿದಾದ ಪರ್ವತದ ತುದಿಯಿಂದ ಜಾರಿ ಆಳವಾದ ಕಂದಕಕ್ಕೆ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಬಿರುಗಾಳಿ ಸಹಿತ…
ವಿಧಾನಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭಾರತೀಯ…
ಹಾಡುಪಾಡು ರಾಮು ಅನುವಾದಿಸಿ ದೇವನೂರ ಮಹಾದೇವ ಸಂಪಾದಿಸಿದ 'ಮಹಾಭಾರತದಿಂದ ಒಂದಿಷ್ಟು ಮೇರುಕೃತಿ' ಬರುವ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈ ಪುಸ್ತಕಕ್ಕೆ…