ರಾಜ್ಯ

ಮಾಜಿ ಸಿಎಂ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಸಹನೆಯ ಕಟ್ಟೆ ಒಡೆಯಲಿದೆ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

ಡಿ.ಕೆ. ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯಲಿದೆ ಎಂಬ ಬೊಮ್ಮಾಯಿ ಹೇಳಿಕೆ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಚಾರವಾಗಿ ಮಾತನಾಡಲು ಪ್ರತ್ಯೇಕವಾಗಿ ಮತ್ತೊಂದು ಮಾಧ್ಯಮಗೋಷ್ಠಿ ನಡೆಸಿ ಉತ್ತರ ನೀಡುತ್ತೇನೆ. ಯಾರೆಲ್ಲಾ ಏನೇನು ಹೇಳಿದ್ದಾರೆ ಎಂದು ನೀವು ಪಟ್ಟಿ ಮಾಡಿಕೊಂಡಿರಿ, ಎಲ್ಲರಿಗೂ ಉತ್ತರ ನೀಡುತ್ತೇನೆ. ಅವರಿಗೆ ಹೊಸ ವರ್ಷದ ಸಂದರ್ಭದಲ್ಲಿ ಒಳ್ಳೆಯದಾಗಲಿ ಎಂದು ಶುಭಕೋರುತ್ತೇನೆ. ಅವರಿಗೆ ಸೂಜಿ ದಾರ ಕಳುಹಿಸಿಕೊಡುತ್ತೇನೆ. ಮೊದಲು ಅವರು ತಮ್ಮ ಒಡೆದ ಮನೆಯನ್ನು ಒಲಿದುಕೊಳ್ಳಲಿ ಎಂದು ತಿರುಗೇಟು ನೀಡಿದರು.

ಇನ್ನು ಸರ್ಕಾರದ ಹಣ ವ್ಯರ್ಥ ಮಾಡುತ್ತಿದ್ದಾರೆ ಎಂಬ ಬಿಜೆಪಿ ಹಾಗೂ ಜೆಡಿಎಸ್ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್‌ನವರು ಬರೀ ಆರೋಪ ಮಾಡುತ್ತಿರಲಿ. ನಾವು ನಮ್ಮ ಸಿದ್ಧಾಂತ, ಆಚಾರ ವಿಚಾರವನ್ನು ಸರ್ಕಾರದ ಮೂಲಕ ಹೇಳುತ್ತೇವೆ. ಬಸವಣ್ಣ, ಕೆಂಪೇಗೌಡ, ಅಂಬೇಡ್ಕರ್, ಗಾಂಧೀಜಿ ಅವರ ಪ್ರತಿಮೆ ಮಾಡುತ್ತೇವೆ. ಈ ದೇಶದಲ್ಲಿ ಅತಿ ಹೆಚ್ಚು ಪ್ರತಿಮೆಗಳಿರುವುದು ಅಂಬೇಡ್ಕರ್ ಅವರದ್ದು, ಕೆಲವರು ಇದನ್ನು ಮರೆತಿದ್ದಾರೆ. ಮರೆತಿದ್ದನ್ನು ನೆನಪಿಸಬೇಕಲ್ಲವೇ. ವಿಧಾನಸೌಧದ ಮುಂದೆ ಇರುವ ಅಂಬೇಡ್ಕರ್ ಅವರ ಹಾಗೂ ಗಾಂಧೀಜಿ, ನೆಹರೂ ಅವರ ಪ್ರತಿಮೆ ಸರ್ಕಾರದ್ದಲ್ಲವೇ? ಮುಂದಿನ ದಿನಗಳಲ್ಲಿ ಮನಮೋಹನ್ ಸಿಂಗ್ ಅವರು ಕೊಟ್ಟ ಕಾರ್ಯಕ್ರಮಗಳ ಬಗ್ಗೆಯೂ ಪ್ರಚಾರ ಮಾಡಲು ನಾವು ರೂಪುರೇಷೆ ಸಿದ್ಧಪಡಿಸುತ್ತಿದ್ದೇವೆ ಎಂದು ತಿಳಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

1 hour ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

1 hour ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

1 hour ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

1 hour ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago